Sidlaghatta : ಮೇ 18 ರ ಶನಿವಾರದಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗುತ್ತದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
66/11 ಕೆವಿ ವೈ ಹುಣಸೇನಹಳ್ಳಿ ವಿದ್ಯುತ್ ಉಪಕೇಂದ್ರದ 66 ಕೆವಿ ಮಾರ್ಗದ ಉನ್ನತೀಕರಣದ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಈ ಉಪಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ವೈ ಹುಣಸೇನಹಳ್ಳಿ, ಸೀಗೆಹಳ್ಳಿ, ಕುಂದಲಗುರ್ಕಿ, ದೇವರಮಳ್ಳೂರು, ಗೊರಮಡುಗು, ಪಿಂಡಿಪಾಪನಹಳ್ಳಿ, ಕಂಗಾನಹಳ್ಳಿ, ಗೊಲ್ಲಹಳ್ಳಿ, ಕೊತ್ತನೂರು, ಕಡಿಶೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕೋರಿದ್ದಾರೆ.