Home News ಶಿಡ್ಲಘಟ್ಟ ನಗರಸಭೆಯ 7 ಮಂದಿ ಸದಸ್ಯರು ಅನರ್ಹ

ಶಿಡ್ಲಘಟ್ಟ ನಗರಸಭೆಯ 7 ಮಂದಿ ಸದಸ್ಯರು ಅನರ್ಹ

0
Sidlaghatta Municipal Councillors Disqualification

Sidlaghatta : ಶಿಡ್ಲಘಟ್ಟ ನಗರಸಭೆ ಅಧ್ಯಕ್ಷ ಮತ್ತು ಉಪಾದ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್‌ನ 7 ಸದಸ್ಯರು ಪಕ್ಷದ ವಿಪ್ ಉಲ್ಲಂಘಿಸಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿದ್ದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯ 7 ಮಂದಿ ನಗರಸಭೆ ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದೆ.

ಕಳೆದ 2024 ರ ಸೆಪ್ಟೆಂಬರ್ 5 ರಂದು ನಡೆದ ಶಿಡ್ಲಘಟ್ಟ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿದ್ದ ಕಾಂಗ್ರೆಸ್‌ ನ 7 ಮಂದಿ ಸದಸ್ಯರ ವಿರುದ್ದ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಹಾಗು ನಗರಸಭೆ ಸದಸ್ಯ ಎಂ.ಶ್ರೀನಿವಾಸ್ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಮೊರೆ ಹೋಗಿದ್ದ ಹಿನ್ನಲೆಯಲ್ಲಿ ಸೋಮವಾರ 7 ಮಂದಿ ನಗರಸಭೆ ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ಅನರ್ಹಗೊಂಡ ಸದಸ್ಯರು :

ನಗರಸಭೆಯ 3 ನೇ ವಾರ್ಡಿನ ಸದಸ್ಯೆ ಎಸ್.ಚಿತ್ರಮನೋಹರ್, 10 ನೇ ವಾರ್ಡಿನ ಸದಸ್ಯ ಎಸ್.ಎಂ.ಮಂಜುನಾಥ್, 11 ನೇ ವಾರ್ಡಿನ ಸದಸ್ಯ ಎಲ್.ಅನಿಲ್‌ಕುಮಾರ್, 16 ನೇ ವಾರ್ಡಿನ ಎನ್.ಕೃಷ್ಣಮೂರ್ತಿ, 22 ನೇ ವಾರ್ಡಿನ ಟಿ.ಮಂಜುನಾಥ್, 28 ನೇ ವಾರ್ಡಿನ ಜಭೀಉಲ್ಲಾ ಮತ್ತು 7 ನೇ ವಾರ್ಡಿನ ಶಿವಮ್ಮ ಮುನಿರಾಜು ಅನರ್ಹಗೊಂಡವರು.

ಜೆಡಿಎಸ್ ಕಾಂಗ್ರೆಸ್ ಸದಸ್ಯರ ಬೆಂಬಲ :

ಕಳೆದ 2024 ರ ಸೆಪ್ಟೆಂಬರ್ 5 ರಂದು ಶಿಡ್ಲಘಟ್ಟ ನಗರಸಭೆಯ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ವೆಂಕಟಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್‌ ನ ರೂಪ ನವೀನ್ ಚುನಾಯಿತರಾದರು. ಆಗ ಸಂಖ್ಯಾಬಲವಿದ್ದರೂ ಅಧಿಕಾರ ಹಿಡಿಯಲು ಕಾಂಗ್ರೆಸ್ ಪಾಳಯ ಸೋತಿತು. ಆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಏಳು ಮಂದಿ ಕಾಂಗ್ರೆಸ್ ಸದಸ್ಯರು ಬೆಂಬಲಿಸಿ, ನೆರವಾಗಿದ್ದರು.

ಅಧ್ಯಕ್ಷಸ್ಥಾನಕ್ಕೆ ಜೆಡಿಎಸ್‌ ನ 9ನೇ ವಾರ್ಡ್‌ ನ ವೆಂಕಟಸ್ವಾಮಿ, ಕಾಂಗ್ರೆಸ್‌ನ ಎಂ.ಶ್ರೀನಿವಾಸ್ ಹಾಗೂ ಉಪಾಧ್ಯಕ್ಷಸ್ಥಾನಕ್ಕೆ ಜೆಡಿಎಸ್‌ ನ ರೂಪ ನವೀನ್ ಮತ್ತು ಕಾಂಗ್ರೆಸ್‌ ನಿಂದ ಸಲ್ಮಾತಾಜ್ ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ ಸ್ಥಾನಕ್ಕೆ ಸ್ಫರ್ಧಿಸಿದ್ದ ವೆಂಕಟಸ್ವಾಮಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ರೂಪ ನವೀನ್ ಅವರು ಶಾಸಕ ಹಾಗೂ ಸಂಸದರ ತಲಾ ಒಂದೊಂದು ಮತ ಸೇರಿದಂತೆ ಒಟ್ಟು ತಲಾ 21 ಮತಗಳನ್ನು ಪಡೆಯುವ ಮೂಲಕ ವಿಜಯ ಸಾಧಿಸಿದ್ದರು. 10 ಮತಗಳನ್ನು ಪಡೆದು ಕಾಂಗ್ರೆಸ್‌ ನ ಎಂ.ಶ್ರೀನಿವಾಸ್ ಮತ್ತು ಸಲ್ಮಾತಾಜ್ ಪರಾಭವಗೊಂಡಿದ್ದರು.

ನಗರಸಭೆಯಲ್ಲಿ ಕಾಂಗ್ರೆಸ್-13, ಜೆಡಿಎಸ್-10, ಬಿಜೆಪಿ-2, ಬಿಎಸ್‌ಪಿ-2 ಹಾಗೂ ಸ್ವತಂತ್ರರು-4 ಸೇರಿ ಒಟ್ಟು 31 ಸಂಖ್ಯಾಬಲವಿದೆ.

ಈ ಪೈಕಿ ಕಾಂಗ್ರೆಸ್‌ ನ ಶಿವಮ್ಮ ಹಾಗೂ ಜೆಡಿಎಸ್‌ ನ ಮುಸ್ತರುನ್ನಿಸಾ ಅವರು ಚುನಾವಣೆ ಪ್ರಕ್ರಿಯೆಯಲ್ಲಿ ಗೈರಾಗಿದ್ದು 29 ಸದಸ್ಯರು ಹಾಜರಾಗಿದ್ದರು.

ಜೆಡಿಎಸ್ ಅಭ್ಯರ್ಥಿಗಳ ಪರ 19 ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪರ 10 ಮತಗಳಷ್ಟೆ ಬಿದ್ದಿದ್ದವು. ಶಾಸಕ ಬಿ.ಎನ್.ರವಿಕುಮಾರ್, ಸಂಸದ ಮಲ್ಲೇಶ್‌ಬಾಬು ಜೆಡಿಎಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version