Nadipinayakanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ಕಪಿಲಮ್ಮ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ (25ರಂದು) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದರು.
ಕಾರ್ಯಕ್ರಮವನ್ನು ಹಳೆಯ ವಿದ್ಯಾರ್ಥಿಗಳಾದ ನವೀನ್ ಎಂ.ಜಿ., ಸಮಾಜಸೇವಕ ರಾಜೇಶ್ ವೈ., ಕೆಎಂಎಫ್ ಪಶುವೈದ್ಯ ಮಾಲಾ ವೈ.ಪಿ., ಅರಣ್ಯ ಸಂರಕ್ಷಣಾಧಿಕಾರಿ, ವಕೀಲ ಭರತ್, ಬಿಪಿಸಿಎಲ್ ಅಧಿಕಾರಿ ವಿನಯ್, ಸಂಸ್ಥಾಪಕ ಅಧ್ಯಕ್ಷ ಎನ್.ಆರ್. ಕೃಷ್ಣಮೂರ್ತಿ, ಕಾರ್ಯದರ್ಶಿಗಳು ವನರಾಜಾ ಲಕ್ಷ್ಮಿ ಮತ್ತು ಸತ್ಯನಾರಾಯಣ, ನವೋದಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಅವರಿಂದ ಉದ್ಘಾಟಿಸಲಾಯಿತು.
ವಿಶೇಷ ಅತಿಥಿಗಳಾಗಿ ಹಾಜರಾದ ಹಿರಿಯ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡು ಕಿರಿಯ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಈ ಸಂದರ್ಭದಲ್ಲಿ ಎನ್.ಆರ್. ಕೃಷ್ಣಮೂರ್ತಿ, ಸತ್ಯನಾರಾಯಣ ಮತ್ತು ಪ್ರಾಂಶುಪಾಲ ಸುದರ್ಶನ್ ಅವರು ಮಾತನಾಡಿ, ಕಾಲೇಜಿನ ಬೆಳವಣಿಗೆ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಗಳನ್ನು ನೆನಪಿಸಿ, ಇಂದಿನ ಪೀಳಿಗೆಯ ಮುಂದೆ ಇರುವ ಸವಾಲುಗಳ ಕುರಿತು ಮಾರ್ಗದರ್ಶನ ನೀಡಿದರು.