Home News ಪಿಯು ಕಾಲೇಜು ವಿದ್ಯಾರ್ಥಿಗಳ ಕ್ರೀಡಾ ಕೂಟ

ಪಿಯು ಕಾಲೇಜು ವಿದ್ಯಾರ್ಥಿಗಳ ಕ್ರೀಡಾ ಕೂಟ

0
Sidlaghatta PU College Sports Championship

Sidlaghatta : ಜಾತಿ ಮತ ಧರ್ಮ ಭಾಷೆಯ ಗಡಿ ಮೀರಿ ಎಲ್ಲರನ್ನೂ ಒಟ್ಟುಗೂಡಿಸುವ ಶಕ್ತಿ ಕ್ರೀಡೆ, ಸಂಗೀತಕ್ಕೆ ಇದೆ. ಕ್ರೀಡೆಯನ್ನು ಸೋಲು ಗೆಲುವಿನ ಮೂಲಕ ಮಾತ್ರ ನೋಡದೆ ಸ್ಪರ್ಧಾತ್ಮಕ ಮನೋಭಾವದಿಂದ ನೋಡಬೇಕಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ ಕ್ರೀಡಾಪಟುಗಳಿಗೆ ತಿಳಿಸಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ತಾಲ್ಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪಿಯು ಕಾಲೇಜು ವಿದ್ಯಾರ್ಥಿಗಳ 2025-26 ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು, ಯುವಜನರು ಸೇರಿದಂತೆ ಎಲ್ಲ ವಯೋಮಾನದವರು ಕೂಡ ಆರೋಗ್ಯದಿಂದ ಇರಬೇಕಾದರೆ ದೈಹಿಕ ಕಸರತ್ತು ಮುಖ್ಯ. ಅದು ವ್ಯಾಯಾಮ ಆಗಿರಬಹುದು ಅಥವಾ ದಿನ ನಿತ್ಯದ ಚಟುವಟಿಕೆ ಆಗಿರಬಹುದು. ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಅಂಕ, ರ್ಯಾಂಕ್ ಗಳಿಸುವ ಧಾವಂತದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದು ಕಡಿಮೆ ಆಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುವ ಸಂಭವ ಹೆಚ್ಚು. ಈ ಬಗ್ಗೆ ಶಿಕ್ಷಕರು, ಇಲಾಖೆ ಹಾಗೂ ಪೋಷಕರು ಗಮನ ಹರಿಸಬೇಕೆಂದು ಮನವಿ ಮಾಡಿದರು.

ಈ ಕ್ರೀಡಾ ಕೂಟದಲ್ಲಿ ಸೋಲು ಗೆಲುವಿನ ದೃಷ್ಟಿಯಲ್ಲಿ ಮಾತ್ರ ಕ್ರೀಡೆಗಳಲ್ಲಿ ಭಾಗವಹಿಸದೆ ಸ್ಪರ್ಧಾತ್ಮಕ ಭಾವನೆಯಿಂದ ಸೋಲು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವದಿಂದ ಆಟ ಆಡಿ ಎಂದು ಕೋರಿದರು.

ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಭರ್ಜಿ ಎಸೆತ, ಗುಂಡು ಎಸೆತ, ಟ್ರಿಪಲ್ ಜಂಪ್ ಸೇರಿ ವಿವಿಧ ರೀತಿಯ 22 ಕ್ರೀಡೆಗಳು ನಡೆದವು. 17 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ವೆಂಕಟಶಿವಾರೆಡ್ಡಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ದೇವೇಂದ್ರಪ್ಪ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ಬಾಬು, ಮಂಜುನಾಥ್, ಪ್ರಕಾಶ್, ಸಂಪತ್, ಪ್ರಸನ್ನ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version