
Sidlaghatta : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಪೋಲಿಯೋ ಮುಕ್ತ ಭಾರತ ಮತ್ತು ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಪೋಷಕರು ಸಹಕರಿಸಬೇಕೆಂದು ಶಾಸಕ ಬಿ.ಎನ್. ರವಿಕುಮಾರ್ ಮನವಿ ಮಾಡಿದರು.
ತಾಲ್ಲೂಕಿನ ಆನೂರು ಹುಣಸೇನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ 0-5 ವರ್ಷದ 20,755 ಮಕ್ಕಳನ್ನು ಗುರುತಿಸಲಾಗಿದ್ದು, ಅವರಿಗೆ ಕಡ್ಡಾಯವಾಗಿ ಪೋಷಕರು ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಮಕ್ಕಳ ಆರೋಗ್ಯ ಕಾಪಾಡುವ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸಹಕರಿಸಬೇಕೆಂದು ವಿನಂತಿಸಿದರು.
ತಹಶೀಲ್ದಾರ್ ಗಗನ ಸಿಂಧು, ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಯ್ಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ ಮೂರ್ತಿ, ಸಿಡಿಪಿಓ ವಿದ್ಯಾ ವಸ್ತ್ರದ, ಕೆ.ಮುತ್ತಕದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ನರ್ಮದಾ, ಮುಖಂಡರಾದ ಮೇಲೂರು ಮಂಜುನಾಥ್, ತಾದೂರು ರಘು, ನಾರಾಯಣಸ್ವಾಮಿ, ಆನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್, ಚಿಕ್ಕಣ್ಣ, ನರಸಿಂಹಮೂರ್ತಿ ಹಾಜರಿದ್ದರು.
ಶಿಡ್ಲಘಟ್ಟ ತಾಲೂಕಿನಲ್ಲಿ 28 ಜೂನ್ ರಂದು ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಗತಿ
Rural : 97.96 %
Urban : 91.30 %
Total : 96.04 %
29 ಜೂನ್ ರಿಂದ ಮನೆ ಮನೆಗೆ ಹೋಗಿ ಉಳಿದ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಮುಂದುವರೆಯುತ್ತದೆ.