Home News ಕನ್ನಡ ರಾಜ್ಯೋತ್ಸವ ಆಚರಿಸುವ ವೃತ್ತಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ

ಕನ್ನಡ ರಾಜ್ಯೋತ್ಸವ ಆಚರಿಸುವ ವೃತ್ತಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ

0
Sidlaghatta Ullurupete Puneeth Rajkumar Circle

ಶಿಡ್ಲಘಟ್ಟ ನಗರದ 22 ನೇ ವಾರ್ಡಿನ ಅಶೋಕ ರಸ್ತೆ, ಉಲ್ಲೂರುಪೇಟೆ ಬಳಿ ಕನ್ನಡ ರಾಜ್ಯೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿರುವ ವೃತ್ತಕ್ಕೆ ನಟ ಪುನೀತ್ ರಾಜ್‌ಕುಮಾರ್‌ ಹೆಸರಿಡಬೇಕೆಂದು ಆಗ್ರಹಿಸಿ ನಗರದ ಸ್ನೇಹ ಯುವಕರ ಸಂಘದ ಸದಸ್ಯರು ನಗರಸಭೆಯ ಪೌರಾಯುಕ್ತ ಶ್ರೀಕಾಂತ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

 ಸ್ನೇಹ ಯುವಕರ ಸಂಘದ ಅಧ್ಯಕ್ಷ ಭರತ್ ಮಾತನಾಡಿ, 22 ನೇ ವಾರ್ಡಿನಲ್ಲಿರುವ ಕನ್ನಡಾಭಿಮಾನಿಗಳು ಕನ್ನಡ ರಾಜ್ಯೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು 30 ವರ್ಷಗಳಿಂದ ಆಯೋಜಿಸುತ್ತಾ ಬಂದಿದ್ದೇವೆ. ಕನ್ನಡ ನಾಡು, ಕನ್ನಡ ನುಡಿ, ಸಾಹಿತ್ಯದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅನೇಕ ಸಾಧಕರನ್ನು ಗುರುತಿಸಿ ಸನ್ಮಾನಿಸಿದ್ದೇವೆ.

 ನಟ ಪುನೀತ್ ರಾಜ್ ಕುಮಾರ್ ಅವರು ಕನ್ನಡ ಚಲನಚಿತ್ರ ರಂಗದಲ್ಲಿ ತನ್ನ ನಟನೆಯಿಂದ ಎಲ್ಲಾ ಕನ್ನಡಿಗರ ಮನೆ ಮಗನಂತಿದ್ದರು ಹಾಗೂ ತನ್ನ ಸಮಾಜಸೇವೆಯ ಮುಖಾಂತರ ಅನೇಕ ಸರ್ಕಾರಿ ಶಾಲೆಗಳ ಅಭಿವೃದ್ಧಿ, ವಿದ್ಯಾರ್ಥಿಗಳ ದತ್ತು ಸ್ವೀಕಾರ, ಅನಾಥ ಹೆಣ್ಣು ಮಕ್ಕಳಿಗೆ ಶಕ್ತಿದಾಮದ ಮೂಲಕ ಆಸರೆಯಾಗಿ, ಗೋವುಗಳ ಸಂರಕ್ಷಣೆ, ಆಶಕ್ತ ಕಲಾವಿದರು ಹಾಗೂ ತನ್ನಲ್ಲಿ ಯಾರೇ ಕಷ್ಟ ಹೇಳಿಕೊಂಡು ಬಂದಾಗ ಕೊಡುಗೈ ದಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಅವರ ನೆನಪಿಗಾಗಿ ಇಲ್ಲಿನ ವೃತ್ತಕ್ಕೆ ಅವರ ಹೆಸರು‌ ನಾಮಕರಣ ಮಾಡಬೇಕೆಂದು ಒತ್ತಾಯಿಸಿದರು.

 ನಟ ಪುನೀತ್ ರಾಜ್ ಕುಮಾರ್ ಅವರ ಆಪಾರ ಸಾಧನೆ ಮತ್ತು ಸಮಾಜಮುಖಿ ಕಾರ್ಯಗಳನ್ನು ಸ್ಮರಿಸುತ್ತಾ ಅವರ ಹೆಸರನ್ನು ನಾವು ರಾಜ್ಯೋತ್ಸವ ಆಚರಿಸುವ ವೃತ್ತಕೈ ಹೆಸರಿಡಲು ಅನುಮತಿ ನೀಡಿ ಆದೇಶ ನೀಡಬೇಕೆಂದು‌ ನಗರಸಭೆಯ ಪೌರಾಯುಕ್ತ ಶ್ರೀಕಾಂತ್ ಅವರಿಗೆ ಮನವಿ ಸಲ್ಲಿಸಿದರು.

 ಮನವಿಯನ್ನು ಸ್ವೀಕರಿಸಿ ಪೌರಾಯುಕ್ತ ಶ್ರೀಕಾಂತ್ ಮಾತನಾಡಿ, ನಟ ಪುನೀತ್ ರಾಜ್‌ಕುಮಾರ್ ಅವರ ಹೆಸರಿಡಲು ನಗರಸಭೆಯಲ್ಲಿ ವಿಷಯ ಮಂಡಿಸಿ ಅನುಮೋದನೆ ಪಡೆದುಕೊಂಡು ನಾಮಕರಣ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

 ಈ‌ ಸಂದರ್ಭದಲ್ಲಿ ನಗರಸಭೆ ಸದಸ್ಯ ಟಿ.ಮಂಜುನಾಥ್, ಕಸಾಪ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಗಿರೀಶ್, ಶ್ರೀನಿವಾಸ್, ಅಪ್ಪಯ್ಯ, ಮಧು, ಜಾನಿ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version