25.1 C
Sidlaghatta
Tuesday, January 27, 2026

ರಾಜೀವ್ ಗೌಡರಿಗೆ ಫೆ.9ರವರೆಗೆ ನ್ಯಾಯಾಂಗ ಬಂಧನ – ನ್ಯಾಯಾಲಯ

- Advertisement -
- Advertisement -

Sidlaghatta : ಶಿಡ್ಲಘಟ್ಟ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ಜೆಎಂಎಫ್ಸಿ ನ್ಯಾಯಾಲಯವು ಫೆ.9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ರಾಜೀವ್ ಗೌಡ ಅವರಿಗೆ ಆಶ್ರಯ ನೀಡಿದ ಆರೋಪದಲ್ಲಿ ಬಂಧಿತರಾಗಿದ್ದ ಮಂಗಳೂರಿನ ಉದ್ಯಮಿ ಮೈಕಲ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರಾಜೀವ್ ಗೌಡ ಅವರನ್ನು ಚಿಂತಾಮಣಿಯ ಉಪಕಾರಾಗೃದಲ್ಲಿ ಇರಿಸಲಾಗಿದೆ.

ವಿಚಾರಣೆಗಾಗಿ ರಾಜೀವ್ ಗೌಡ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಸಲ್ಲಿಸಿದ ಮನವಿಯನ್ನು ನ್ಯಾಯಾಧೀಶರು ತಿರಸ್ಕರಿಸಿದರು. ತಮ್ಮ ಕಕ್ಷಿದಾರರು ಸಮಾಜದಲ್ಲಿ ಪ್ರತಿಷ್ಠಿತ ವ್ಯಕ್ತಿ ಆಗಿದ್ದಾರೆ. ಕಾರಾಗೃಹಕ್ಕೆ ಕಳುಹಿಸಬಾರದು ಎಂದು ರಾಜೀವ್ ಗೌಡ ಪರ ವಕೀಲರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನೂ ವಜಾಗೊಳಿಸಿದ ನ್ಯಾಯಾಧೀಶರು ಬುಧವಾರ ಜಾಮೀನಿನ ವಿಚಾರಣೆ ಆರಂಭಿಸುವುದಾಗಿ ತಿಳಿಸಿದರು.

ರಾಜೀವ್ ಗೌಡ ಪರ ವಿವೇಕ್ ಸುಬ್ಬಾರೆಡ್ಡಿ, ಸರ್ಕಾರದ ಪರ ಮಹಮ್ಮದ್ ಖಾಜಾ ವಾದ ಮಂಡಿಸಿದರು.

ಸೋಮವಾರ ಕೇರಳದ ಮಲ್ಲಪ್ಪುರಂ ಜಿಲ್ಲೆಯ ವಾಜಿ ಕಡಬು ಎಂಬಲ್ಲಿ ರಾಜೀವ್ ಗೌಡ ಮತ್ತು ಉದ್ಯಮಿ ಮೈಕಲ್ ಅವರನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದರು. ಮಂಗಳವಾರ ಬೆಳಗಿನ ಜಾವ ಚಿಕ್ಕಬಳ್ಳಾಪುರಕ್ಕೆ ಕರೆ ತಂದ ಪೊಲೀಸರು ಮಧ್ಯಾಹ್ನದವರೆಗೆ ಪೊಲೀಸ್ ಅತಿಥಿ ಗೃಹದಲ್ಲಿ ವಿಚಾರಣೆ ನಡೆಸಿದರು. ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಶಿಡ್ಲಘಟ್ಟ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!