
ನಮ್ಮ ಮಕ್ಕಳಿಗೆ ನಾವು ಶ್ರೀರಾಮಾಯಣ, ಮಹಾಭಾರತದ ಕಥೆಗಳನ್ನು ಹೇಳಿ ಕಥೆಯ ಸಾರಾಂಶವನ್ನು ಅರ್ಥ ಮಾಡಿಸಬೇಕು. ಮಕ್ಕಳಿಗೆ ಉತ್ತಮ ವಿದ್ಯೆ ಜತೆಗೆ ನಮ್ಮ ಧರ್ಮ, ಸಂಸ್ಕøತಿ, ಸಂಪ್ರದಾಯಗಳ ಬಗ್ಗೆಯೂ ಮನವರಿಕೆ ಮಾಡಿಕೊಡಬೇಕು ಎಂದು ಚಿಕ್ಕದಾಸರಹಳ್ಳಿಯ ಲಕ್ಷ್ಮಿ ವಿದ್ಯಾನಿಕೇತನ ಶಾಲೆಯ ಮುಖ್ಯಸ್ಥ ದೇವರಾಜ್ ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಕೆವಿ ಭವನದಲ್ಲಿ ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್ಟ್ನಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಶ್ರೀರಾಮಾಯಣ, ಮಹಾಭಾರತ, ಸ್ವಾತಂತ್ರ್ಯ ಹೋರಾಟಗಾರರ ಕುರಿತ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಕೇವಲ ಓದು ಬರಹ, ಅಂಕ ಗಳಿಸಿ ಉತ್ತಮ ಮಾರ್ಕ್ಸ್ ಪಡೆಯಲು ಮಕ್ಕಳನ್ನು ತಯಾರು ಮಾಡುತ್ತಿದ್ದಾರೆಯೆ ಹೊರತು ಮಕ್ಕಳಲ್ಲಿ ಕಿರಿಯರು, ಹಿರಿಯರು ಎನ್ನುವ ಭಕ್ತಿ ಭಾವ, ದೇವರು ಧರ್ಮ ಎನ್ನುವ ಸಂಸ್ಕಾರವನ್ನು ಹೇಳಿಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದರಿಂದ ಮಕ್ಕಳಲ್ಲಿ ನಮ್ಮ ಧರ್ಮ ಸಂಸ್ಕøತಿ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ, ಸಮಯ ಇಲ್ಲದಾಗಿದ್ದು ಇದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾ ಎಂದು ಪ್ರಶ್ನಿಸಿದರು.
ಈ ನಿಟ್ಟಿನಲ್ಲಿ ನಮ್ಮ ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್ಟ್ನಿಂದ ಪ್ರೌಢಶಾಲಾ ಮಕ್ಕಳಲ್ಲಿ ರಾಮಾಯಣ, ಮಹಾಭಾರತ ಹಾಗೂ ಸ್ವಾತಂತ್ರ್ಯ ಹೋರಾಟ, ಹೋರಾಟಗಾರರ ಬಗ್ಗೆ ಅರಿವು ಮೂಡಿಸಿ ಹೆಮ್ಮೆ ಮೂಡಿಸುವ ಹಾದಿಯಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ತಾಲ್ಲೂಕಿನ 37 ಪ್ರೌಢಶಾಲೆಗಳಿಂದ ತಲಾ ಇಬ್ಬರಂತೆ ಒಟ್ಟು 74 ವಿದ್ಯಾರ್ಥಿಗಳು ರಸಪ್ರಶ್ನೆಯಲ್ಲಿ ಭಾಗವಹಿಸಿದ್ದರು. ಮೊದಲ ಮೂರು ಸುತ್ತು ಲಿಖಿತ ಪರೀಕ್ಷೆ ಹಾಗೂ ಅಂತಿಮವಾಗಿ ರಸಪ್ರಶ್ನೆಯಲ್ಲಿ ಪಂಚಮುಖಿ ಶಾಲೆಯ ವಿದ್ಯಾರ್ಥಿಗಳು ಮೊದಲನೆ ಬಹುಮಾನ 50,000 ರೂ,ನಗದು, ದ್ವಿತೀಯ ಬಹುಮಾನವನ್ನು ಕ್ರೆಸೆಂಟ್ ಶಾಲೆಯ ಸಿಬಿಎಸ್ಸಿ ವಿಭಾಗದ ವಿದ್ಯಾರ್ಥಿಗಳು 30,000 ರೂ,ನಗದು ಹಾಗೂ ಕ್ರೆಸೆಂಟ್ ಶಾಲೆಯ ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳು 3 ನೇ ಬಹುಮಾನ 20 ಸಾವಿರ ರೂ.ನಗದನ್ನು ಪಡೆದರು.
ನವೋದಯ ಶಾಲೆಯ ವಿದ್ಯಾರ್ಥಿಗಳು 4ನೇ ಸ್ಥಾನ ಪಡೆದು 5000 ರೂ, ಹಾಗೂ ಜಂಗಮಕೋಟೆಯ ಜ್ಞಾನಜೋತಿ ಶಾಲೆ ವಿದ್ಯಾರ್ಥಿಗಳು 5 ನೇ ಸ್ಥಾನ ಪಡೆದು 5000 ರೂ,ನಗದು ಬಹುಮಾನವನ್ನು ತನ್ನದಾಗಿಸಿಕೊಂಡರು.
ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್ಟ್ನ ಗೌರವಾಧ್ಯಕ್ಷ ಪ್ರಕಾಶ್, ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಮಂಜುನಾಥ್, ಅಜಿತ್, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ರವಿಚಂದ್ರ, ನಾಗೇಶ್, ಅಶ್ವತ್ಥ್, ದೇವರಾಜ್, ವೆಂಕಟೇಶ್, ಕಿರಣ್, ರಾಮಾಂಜನೇಯ, ನಾಗೇಶ್, ಲಕ್ಷ್ಮೀಕಾಂತ್, ಅನಿಲ್ ಕುಮಾರ್, ಲಕ್ಷ್ಮೀಪತಿ ಇನ್ನಿತರರು ಹಾಜರಿದ್ದರು.