20.1 C
Sidlaghatta
Wednesday, January 14, 2026

ಸಾದಲಿ ಸಹಕಾರಿ ಸಂಘದಲ್ಲಿ ಹೊಸ ಮಂಡಳಿ ಅಧಿಕಾರಕ್ಕೆ

- Advertisement -
- Advertisement -

Sadali, Sidlaghatta, Chikkaballapur : ಗ್ರಾಮೀಣ ಭಾಗದಲ್ಲಿ ಕೃಷಿಕರ ಬದುಕು ಮತ್ತು ಕೃಷಿ ಅಭಿವೃದ್ಧಿಯಲ್ಲಿ ಸಹಕಾರಿ ಸೇವಾ ಬ್ಯಾಂಕುಗಳ ಪಾತ್ರ ಅತ್ಯಂತ ಮುಖ್ಯವಾಗಿದ್ದು, ವಾಣಿಜ್ಯ ಮತ್ತು ರಾಷ್ಟ್ರೀಯ ಬ್ಯಾಂಕುಗಳಿಗಿಂತಲೂ ಸಹಕಾರಿ ಬ್ಯಾಂಕುಗಳು ರೈತರಿಗೆ ಹೆಚ್ಚು ಹತ್ತಿರವಾಗಿ ಸೇವೆ ಸಲ್ಲಿಸುತ್ತಿವೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ತಾಲ್ಲೂಕಿನ ಸಾದಲಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಜೆಡಿಎಸ್ ಬೆಂಬಲಿತ ನಿರ್ದೇಶಕರಿಗೆ ತಮ್ಮ ಗೃಹ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಅಥವಾ ಬಡ್ಡಿರಹಿತವಾಗಿ ಸಕಾಲಕ್ಕೆ ಸಾಲ ನೀಡುವ ಮೂಲಕ ಸಹಕಾರಿ ಬ್ಯಾಂಕುಗಳು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತಿವೆ ಎಂಬುದನ್ನು ಅವರು ಒತ್ತಿ ಹೇಳಿದರು.

ಚುನಾವಣಾ ಸಮಯದಲ್ಲಿ ರಾಜಕೀಯ ಚರ್ಚೆಗಳು ನಡೆಯುವುದು ಸಹಜವಾದರೂ, ಚುನಾವಣೆ ಬಳಿಕ ಸೋಲು–ಗೆಲುವು ಮೀರಿಸಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕೆಂದರು. ಸಹಕಾರಿ ಸಂಸ್ಥೆಗಳಲ್ಲಿ ಅನಗತ್ಯ ರಾಜಕೀಯ ನುಸುಳದಂತೆ ನೋಡಿಕೊಳ್ಳುವುದು ಹೊಸದಾಗಿ ಆಯ್ಕೆಯಾದ ನಿರ್ದೇಶಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸಾದಲಿ ಸಹಕಾರಿ ಬ್ಯಾಂಕು ಹಿಂದೆ ಕಾಂಗ್ರೆಸ್ ಅಭ್ಯರ್ಥಿಗಳ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಈ ಬಾರಿ ಮತದಾರರು ಜೆಡಿಎಸ್ ಬೆಂಬಲಿತ ಮಂಡಳಿಗೆ ಅಧಿಕಾರ ನೀಡಿ ಬದಲಾವಣೆಯನ್ನು ತೋರಿಸಿದ್ದಾರೆ. ಮತದಾರರ ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನೀವು ಉತ್ತಮ ಆಡಳಿತ ನೀಡಬೇಕು ಎಂದು ನಿರ್ದೇಶಕರಿಗೆ ಅವರು ಮನವಿ ಮಾಡಿದರು.

ವಿಜಯಶಾಲಿಯಾದ ನಿರ್ದೇಶಕರಾದ ಸಿ.ಅಶ್ವತ್ಥಪ್ಪ, ಕೆ.ಉಮಾಶಂಕರ್, ಆರ್.ತ್ಯಾಗರಾಜ್, ಮಂಜುಳಮ್ಮ, ಸುಬ್ಬರತ್ನಮ್ಮ, ನರಸಿಂಹಮೂರ್ತಿ, ಎಸ್.ಎಲ್.ಅಶ್ವತ್ಥನಾರಾಯಣ್, ವೆಂಕಟೇಶ್, ಎಸ್.ಕೃಷ್ಣಾರೆಡ್ಡಿ, ಕೆ.ವಿ.ನಂಜಪ್ಪ ಸೇರಿದಂತೆ ಹಲವರು ಹಾಗೂ ಸ್ಥಳೀಯ ಜೆಡಿಎಸ್ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!