Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಸಿ.ಬಿ. ಪ್ರಕಾಶ್ ಅವರು ತಮ್ಮ ಅತ್ಯುತ್ತಮ ಸೇವೆಗೆ ರಾಜ್ಯಪಾಲರಿಂದ ಪ್ರಶಂಸನಾ ಪ್ರಮಾಣ ಪತ್ರ ಹಾಗೂ ಬೆಳ್ಳಿ ಪದಕವನ್ನು ಸ್ವೀಕರಿಸಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಸೇವೆಯನ್ನು ಪರಿಗಣಿಸಿ, ಶುಕ್ರವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ಚಂದ್ ಗೆಹಲೋಟ್ ಅವರು ಪ್ರಕಾಶ್ ಅವರಿಗೆ ಪ್ರಶಂಸನಾ ಪ್ರಮಾಣ ಪತ್ರ ಮತ್ತು ಬೆಳ್ಳಿ ಪದಕವನ್ನು ನೀಡಿದರು. ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಮುಖ್ಯ ಆಯುಕ್ತ ಕೆ.ಕೆ. ಖಂಡೇಲ್ವಾಲ್, ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ರಾಜ್ಯ ಆಯುಕ್ತ ಎಂ.ಎ. ಖಾಲಿದ್, ಗೀತಾ ನಟರಾಜ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ತ್ರಿಲೋಕ ಚಂದ್ರ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಡಯಟ್ ಪ್ರಾಂಶುಪಾಲ ಹಾಗೂ ಜಿಲ್ಲಾ ಮುಖ್ಯ ಆಯುಕ್ತ ಎಂ. ಮುನಿಕೆಂಪೇಗೌಡರೊಂದಿಗೆ ಜಿಲ್ಲಾ ಕಾರ್ಯದರ್ಶಿ ಸಿ.ಬಿ. ಪ್ರಕಾಶ್ ಅವರಿಗೆ ಈ ಗೌರವ ಲಭಿಸಿತು.








