27.1 C
Sidlaghatta
Sunday, August 3, 2025

ರೇಷ್ಮೆ ಬೆಳೆಗಾರರಿಗೆ ತಂತ್ರಜ್ಞಾನದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

- Advertisement -
- Advertisement -

Devaramallur, Sidlaghatta : ರೇಷ್ಮೆ ಕೃಷಿಯಲ್ಲಿ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರು ವೈಜ್ಞಾನಿಕ ವಿಧಾನವನ್ನು ಅಳವಡಿಸಿಕೊಂಡು ಗುಣಮಟ್ಟಕ್ಕೆ ಆದ್ಯತೆ ನೀಡಬೇಕೆಂದು ಕೇಂದ್ರ ರೇಷ್ಮೆ ಮಂಡಳಿಯ ನಿರ್ದೇಶಕ ಮಳ್ಳೂರು ಶಿವಣ್ಣ ತಿಳಿಸಿದರು.

ತಾಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಶನಿವಾರ ರೇಷ್ಮೆ ಇಲಾಖೆ ಹಾಗೂ ಕೇಂದ್ರ ರೇಷ್ಮೆ ಮಂಡಳಿಯ ಸಂಯೋಗದೊಂದಿಗೆ ಆಯೋಜಿಸಿದ್ದ, ನನ್ನ ರೇಷ್ಮೆ ನನ್ನ ಹೆಮ್ಮೆ ಕಾರ್ಯಕ್ರಮದ ಅಡಿಯಲ್ಲಿ ರೇಷ್ಮೆ ಬೆಳೆಗಾರರಿಗೆ ತಂತ್ರಜ್ಞಾನದ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೇಷ್ಮೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ರೇಷ್ಮೆ ಬೆಳೆಗಾರರಿಗೆ ನೂತನ ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಚೀನಾ ದೇಶವನ್ನು ಮೀರಿಸಲು ನಾವು ತಾಂತ್ರಿಕತೆಯನ್ನು ಆದಷ್ಟು ಅಳವಡಿಸಿಕೊಳ್ಳಬೇಕಾಗಿದೆ ಎಂದರು.

ಸಿ.ಎಸ್‌.ಬಿ ಸಹಾಯಕ ನಿರ್ದೇಶಕ ಮಹೇಶ್ ಮಾತನಾಡಿ, ರೇಷ್ಮೆ ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ವಿಜ್ಞಾನಿಗಳು ನೀಡುವ ಸಲಹೆ ಸೂಚನೆಗಳನ್ನು ಪಾಲಿಸಿದರೆ ಗುಣಮಟ್ಟದ ರೇಷ್ಮೆ ಗೂಡು ಉತ್ಪಾದನೆ ಆಗುತ್ತದೆ. ಅದರ ಮೂಲಕ ಗುಣಮಟ್ಟದ ನೂಲು ಸಹ ಉತ್ಪಾದನೆಯಾಗಿ ಗ್ರಾಹಕರಿಗೆ ಗುಣಮಟ್ಟದ ಸೀರೆ ಸಹ ಲಭಿಸುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ರೇಷ್ಮೆ ಉಪ ನಿರ್ದೇಶಕ ಮಾರಪ್ಪ ಬಾಲಪ್ಪ ಬೀರಲದಿನ್ನಿ, ವಿಜ್ಞಾನಿಗಳಾದ ಡಾ. ಪಿ. ಎಂ. ಮುನಿಸ್ವಾಮಿ ರೆಡ್ಡಿ, ಡಾ. ಪರಮೇಶ್ವರ ನಾಯಕ್, ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ವಿಸ್ತರಣಾಧಿಕಾರಿ ಜಗದೇವಪ್ಪ ಗುಗ್ಗಿರಿ, ದೇವರ ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರ ದೇವರಾಜ್, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಮುನಿರಾಜು, ಕಾರ್ಯದರ್ಶಿ ಅಶ್ವತಪ್ಪ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ, ಮುಖಂಡರಾದ ನಂಜುಂಡಪ್ಪ, ಶ್ರೀರಾಮಪ್ಪ ಹಾಗೂ ರೇಷ್ಮೆ ಬೆಳೆಗಾರರು ಹಾಜರಿದ್ದರು.

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!