Sorakayalahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸೊರಕಾಯಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಸುರೇಶ್ ಹಾಗೂ ಉಪಾಧ್ಯಕ್ಷರಾಗಿ ಮಹಬೂಬ್ ಪಾಷ ಅವಿರೋಧವಾಗಿ ಆಯ್ಕೆಯಾದರು.
ಒಟ್ಟು 11 ಸಂಖ್ಯಾ ಬಲವಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾದ್ಯಕ್ಷರ ಚುನಾವಣೆ ಮಂಗಳವಾರ ನಡೆಯಿತು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಚುನಾವಣಾಧಿಕಾರಿಯಾಗಿ ಎಂ.ಮಂಜುನಾಥ್ ಕಾರ್ಯನಿರ್ವಹಿಸಿದರು.
ಸೊರಕಾಯಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ಎಸ್.ಎಂ ರವಿಚಂದ್ರ, ಎಸ್.ವಿ.ಕೃಷ್ಣಪ್ಪ, ನರಸಿಂಹಯ್ಯ, ಸುಧಾಕರ, ಬಲರಾಮ, ಕೃಷ್ಣಪ್ಪ, ರಾಮಕೃಷ್ಣಪ್ಪ, ಸುಗುಣಮ್ಮ, ಪಿಳ್ಳಮ್ಮ, ಗ್ರಾ.ಪಂ ಮಾಜಿ ಅಧ್ಯಕ್ಷ ದೊಡ್ಡದಾಸರಹಳ್ಳಿ ಆರ್.ನಂಜಪ್ಪ, ಗ್ರಾ.ಪಂ ಸದಸ್ಯರಾದ ಮದ್ದೂರಮ್ಮ ಮುನಿರಾಜು, ದೊಡ್ಡದಾಸರಹಳ್ಳಿ ಲಕ್ಷ್ಮೀದೇವಮ್ಮ ದೇವರಾಜ್, ಮಾಜಿ ಗ್ರಾ.ಪಂ ಸದಸ್ಯರಾದ ಎಸ್.ಎಂ.ದಾಸ್, ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ವಿ.ನಾಗಚಂದ್ರ, ಹಾಲು ಪರೀಕ್ಷಕರಾದ ಮುನಿರಾಜು, ಹಾಜರಿದ್ದರು.