Home News ವಿದ್ಯಾರ್ಥಿಗಳು ಶಾಂತ ಚಿತ್ತದಿಂದ SSLC ಪರೀಕ್ಷೆಯನ್ನು ಎದುರಿಸಿ – ತಹಶೀಲ್ದಾರ್ ಎನ್.ಗಗನಸಿಂಧು

ವಿದ್ಯಾರ್ಥಿಗಳು ಶಾಂತ ಚಿತ್ತದಿಂದ SSLC ಪರೀಕ್ಷೆಯನ್ನು ಎದುರಿಸಿ – ತಹಶೀಲ್ದಾರ್ ಎನ್.ಗಗನಸಿಂಧು

0
Sidlaghatta SSLC Exam 2026 Tehsildar Gagana Sindhu

Sidlaghatta : ವಿದ್ಯಾರ್ಥಿಗಳು ಯಾವುದೆ ಕಾರಣಕ್ಕೂ ಒತ್ತಡಕ್ಕೆ ಒಳಗಾಗದೆ ಶಾಂತ ಚಿತ್ತದಿಂದ ಪರೀಕ್ಷೆಯನ್ನು ಎದುರಿಸಿ. ಮನೆಗಳಲ್ಲೂ ಸಹ ಪೋಷಕರು ಮಕ್ಕಳ ಮೇಲೆ ವಿನಾಕಾರಣ ಒತ್ತಡ ಹಾಕುವುದು ಬೇಡ ಎಂದು ತಹಶೀಲ್ದಾರ್ ಎನ್.ಗಗನಸಿಂಧು ಎಸ್.ಎಸ್.ಎಲ್.ಸಿ ಪರೀಕ್ಷಾರ್ಥಿಗಳು ಹಾಗೂ ಪೋಷಕರಲ್ಲಿ ಮನವಿ ಮಾಡಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ಹಿನ್ನಲೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಸಮನ್ಯಯ ಸಭೆಯಲ್ಲಿ ಅವರು ಮಾತನಾಡಿದರು.

ಇದೆ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಅದಕ್ಕೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಸಮಚಿತ್ತದಿಂದ ಪರೀಕ್ಷೆಯನ್ನು ಬರೆಯಿರಿ ಎಂದು ಸಲಹೆ ನೀಡಿದರು.

ಜತೆಗೆ ಪೋಷಕರು ಕೂಡ ತಮ್ಮ ಮಕ್ಕಳ ಮೇಲೆ ವಿನಾಕಾರಣ ಹೆಚ್ಚು ಅಂಕಗಳಿಸುವಂತೆ ಒತ್ತಡ ಹಾಕದಿರುವಂತೆ ಮನವಿ ಮಾಡಿ, ಅವರು ಪರೀಕ್ಷೆಗೆ ಶಾಂತ ಚಿತ್ತವಾಗಿ ಸಿದ್ದವಾಗುವ ವಾತಾವರಣವನ್ನು ಮನೆಯಲ್ಲಿ ನಿರ್ಮಿಸಿ ಎಂದು ಕೋರಿದರು.

ಒಟ್ಟಾರೆ ಈ ಬಾರಿ ಶಿಡ್ಲಘಟ್ಟದಲ್ಲಿ ಶೇ 100 ರಷ್ಟು ಫಲಿತಾಂಶ ಬರುವ ಭರವಸೆಯಿದೆ ಎಂದರು.

10 ಕೇಂದ್ರಗಳು :

ತಾಲ್ಲೂಕಿನಲ್ಲಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು 1363 ಬಾಲಕರು, 1323 ಬಾಲಕಿಯರು ಸೇರಿ ಒಟ್ಟು 2686 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

10 ಪರೀಕ್ಷಾ ಕೇಂದ್ರಗಳಲ್ಲಿ 190 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದ್ದು ಪ್ರತಿ ಪರೀಕ್ಷಾ ಕೊಠಡಿಗೆ ಒಬ್ಬರಂತೆ 190 ಪರೀಕ್ಷಾ ಕೊಠಡಿ ಮೇಲ್ವಿಚಾರಕರು, 10 ಮಂದಿ ಮುಖ್ಯ ಅಧೀಕ್ಷಕರು, 4 ಮಂದಿ ಉಪ ಮುಖ್ಯ ಅಧೀಕ್ಷಕರು, 10 ಮಂದಿ ಕಸ್ಟೋಡಿಯನ್, ಪರೀಕ್ಷಾ ಕೇಂದ್ರದಲ್ಲೂ ಮೊಬೈಲ್ ಬಳಕೆ ನಿಷೇಧಿಸಿದ್ದು ಮೇಲ್ವಿಚಾರಕರದ್ದೂ ಸೇರಿ ಎಲ್ಲರ ಮೊಬೈಲ್‌ ಗಳನ್ನು ಸಂಗ್ರಹಿಸುವ 10 ಮಂದಿ ಮೊಬೈಲ್ ಸ್ವಾಧೀನಾಧಿಕಾರಿಗಳು, 10 ಸ್ಥಾನಿಕ ಜಾಗೃತ ದಳ ಅಧಿಕಾರಿಗಳು, 20 ಮಂದಿ ಪೊಲೀಸ್ ಸಿಬ್ಬಂದಿ, 10 ಮಂದಿ ಆರೋಗ್ಯ ಸಿಬ್ಬಂದಿ ಯನ್ನೊಳಗೊಂಡ ಒಟ್ಟು 300 ಮಂದಿ ಪರೀಕ್ಷಾ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ನಗರಸಭೆ ಪೌರಾಯುಕ್ತೆ ಜಿ.ಅಮೃತ, ಶಿಕ್ಷಣ ಇಲಾಖೆಯ ಇಸಿಓ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version