Varadanayakanahalli, Sidlaghatta, Chikkaballapur : ಶಾಲೆಯಲ್ಲಿ ಶಿಕ್ಷಕರು ಕಲಿಸಿದ್ದನ್ನು ಮನೆಯಲ್ಲಿ ಮತ್ತೆ ಓದಬೇಕು ಹಾಗೂ ನೀವು ಕಲಿತ ಸಂಗತಿಗಳನ್ನು ಮನೆಯಲ್ಲಿ ಪೋಷಕರಿಗೂ ಹೇಳಬೇಕು. ಅನೇಕ ಗಣ್ಯರು ಸರ್ಕಾರಿ ಶಾಲೆಗಳಲ್ಲೇ ವಿದ್ಯಾಭ್ಯಾಸವನ್ನು ಮಾಡಿದ್ದಾರೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಕಲಿತ ಮಕ್ಕಳು ಮುಂದಿನ ದಿನಗಳಲ್ಲಿ ಕೀರ್ತಿವಂತರಾಗಿ ಬೆಳೆಯಬೇಕೆಂದು ತಹಶೀಲ್ದಾರ್ ಗಗನ ಸಿಂಧು ಹೇಳಿದರು.
ತಾಲ್ಲೂಕಿನ ವರದನಾಯಕನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕರ,ಶಿಕ್ಷಕರ ಮಹಾಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಾಲಾ ಮಕ್ಕಳೊಂದಿಗೆ ಕುಳಿತು ಊಟ ಮಾಡಿ ಮಕ್ಕಳಿಗೆ ಶಿಕ್ಷಣ ಮಹತ್ವದ ಬಗ್ಗೆ ತಿಳಿಸಿದರು. ಪೋಷಕರಿಗೂ ಮಕ್ಕಳ ಶಿಕ್ಷಣದ ಬಗ್ಗೆ ಹಾಗೂ ಅವರು ಕಲಿಯುತ್ತಿರುವ ಶಾಲೆಯ ಬಗ್ಗೆ ಕಾಳಜಿ ವಹಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಕಸಬಾ ಹೋಬಳಿ ಆರ್.ಐ ವೇಣುಗೋಪಾಲ್, ವಿ.ಎ. ನಾಗರಾಜ್, ಶಾಲಾ ಮುಖ್ಯ ಶಿಕ್ಷಕಿ ಶಾಮಲ, ಲಕ್ಷ್ಮಿದೇವಿ, ಅಂಜಲಿ, ಶ್ರೀನಾಥ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕ ಈ ಧರೆ ಪ್ರಕಾಶ್, ಎಸ್.ಡಿಎಂಸಿ ಅಧ್ಯಕ್ಷ ಗಂಗಾಧರ್, ಕವಿತಾ, ನಾಗರಾಜ್, ಮಹೇಶ್, ಮೂರ್ತಿ, ಅಕ್ಕಯಮ್ಮ ಹಾಜರಿದ್ದರು.
For Daily Updates WhatsApp ‘HI’ to 7406303366









