19.5 C
Sidlaghatta
Sunday, July 20, 2025

ಪ್ರತಿಭಾ ಪುರಸ್ಕಾರ ಸಮಾರಂಭ

- Advertisement -
- Advertisement -

Sidlaghatta : ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶ ಅವರು ದಾರಿ ತಪ್ಪದೇ ಸನ್ಮಾರ್ಗದಲ್ಲಿ ನಡೆದು ವಿದ್ಯಾವಂತರಾಗಿ ಕೀರ್ತಿವಂತರಾಗಲಿ ಎಂಬುದಾಗಿದೆ ಎಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ ತಿಳಿಸಿದರು.

ತಾಲ್ಲೂಕಿನ ಹಂಡಿಗನಾಳದ ಕೆ.ವಿ.ಭವನದಲ್ಲಿ ಶ್ರೀ ಕೆಂಪಣ್ಣಸ್ವಾಮಿ, ಶ್ರೀ ವೀರಣ್ಣಸ್ವಾಮಿ ದೇವಾಲಯ ಟ್ರಸ್ಟ್‌ ವತಿಯಿಂದ 10 ನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು.

ಬರಿ ವಿದ್ಯೆ ಇದ್ದರೆ ಸಾಲದು ಮಾನವೀಯ ಮೌಲ್ಯ, ಸನ್ನಡತೆ, ಸಂಸ್ಕಾರ, ವಿವೇಕ ಸಹ ಇರಬೇಕು. ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ. ವಿದ್ಯಾರ್ಥಿಗಳು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು, ಪುಸ್ತಕ ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಪಠ್ಯೇತರ ಓದುವಿಕೆಯು ಆಲೋಚನಾ ಪರಿಧಿಯನ್ನು ವಿಕಸನಗೊಳಿಸುತ್ತದೆ. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇತರರಿಗೆ ಮಾದರಿಯಾಗುವಂತೆ ಸಾಧಕರಾಗಬೇಕು. ಸೇವಾ ಮನೋಭಾವ ಹಾಗೂ ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚುವ ಮನೋಬಾವ ಬೆಳೆಸಿಕೊಳ್ಳಿ ಎಂದರು.

ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಮಾತನಾಡಿ, ದ್ವೇಷದಿಂದ ಏನೂ ಸಾಧಿಸಲಾಗುವುದಿಲ್ಲ, ಪ್ರೀತಿಯಿಂದ ಸರ್ವಸ್ವವನ್ನೂ ಪಡೆಯಬಹುದು ಮತ್ತು ಲೋಕವನ್ನು ಗೆಲ್ಲಬಹುದು. ಹಿರಿಯರನ್ನು ಗೌರವಿಸುವ ಸಮಾಜ ಸಂಸ್ಕಾರ ಮತ್ತು ಮೌಲ್ಯಗಳಿಂದ ಕೂಡಿರುತ್ತದೆ, ಪ್ರತಿಭೆಯನ್ನು ಪ್ರೋತ್ಸಾಹಿಸುವ ಸಮಾಜ ಪ್ರಗತಿ ಕಾಣುತ್ತದೆ ಎಂದು ಹೇಳಿದರು.

ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಂಕಗಳಷ್ಟೇ ಮುಖ್ಯವಲ್ಲ, ಬದುಕಿನ ಬಗ್ಗೆ ತಿಳಿವಳಿಕೆ ಬಹಳ ಮುಖ್ಯ. ಹೆಣ್ಣು ಮಕ್ಕಳ ಅಗಾಧವಾದ ಸಾಧನೆ ನಮ್ಮ ಕಣ್ಣಮುಂದಿದೆ. ಸಾಧಕರ ಪರಿಶ್ರಮ, ಚಿಂತನೆ, ಸಮಾಜಮುಖಿ ನಡವಳಿಕೆ ಮಾರ್ಗದರ್ಶನವಾಗಲಿ ಎಂದು ಹೇಳಿದರು.

ಶ್ರೀ ಕೆಂಪಣ್ಣಸ್ವಾಮಿ, ಶ್ರೀ ವೀರಣ್ಣಸ್ವಾಮಿ ದೇವಾಲಯದ ಒಕ್ಕಲಿನ ಕುಲಬಾಂಧವರ ಮಕ್ಕಳಲ್ಲಿ ಎಸ್ಸೆಸ್ಸೆಲ್ಸಿ , ಪಿಯುಸಿ ಪರೀಕ್ಷೆ ಮತ್ತು ಉನ್ನತ ಶಿಕ್ಷಣದಲ್ಲಿ 2023-2024ನೇ ಸಾಲಿನಲ್ಲಿ ಶೇ 85 ಕ್ಕಿಂತಲೂ ಹೆಚ್ಚು ಅಂಕಗಳಿಸಿರುವ ಒಟ್ಟು 112 ಮಕ್ಕಳನ್ನು ಅವರ ಪೋಷಕರೊಂದಿಗೆ ಪುರಸ್ಕರಿಸಲಾಯಿತು. ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಬರೆದಿರುವ “ಸಂವಿಧಾನ ಓದು” ಪುಸ್ತಕವನ್ನು ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿ, ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ನೀಡಲಾಯಿತು.

ಮಾಜಿ ಶಾಸಕ ವಿ.ಮುನಿಯಪ್ಪ, ಶ್ರೀಕೆಂಪಣ್ಣಸ್ವಾಮಿ ಶ್ರೀವೀರಣ್ಣಸ್ವಾಮಿ ದೇವಾಲಯ ಟ್ರಸ್ಟ್‌ನ ಅಧ್ಯಕ್ಷ ಎನ್.ನಾಗರಾಜ್, ಉಪಾಧ್ಯಕ್ಷ ಬಿಳಿಶಿವಾಲೆ ರವಿ, ಕಾರ್ಯದರ್ಶಿ ಅಶ್ವತ್ಥಯ್ಯ, ಖಜಾಂಚಿ ಮುನಿಶಾಮಿಗೌಡ, ಟ್ರಸ್ಟಿಗಳಾದ ಚಿಕ್ಕದಾಸರಹಳ್ಳಿ ದೇವರಾಜ್, ಗೊರಮಡಗು ರಾಜಣ್ಣ, ಆನೂರು ವಿಜಯೇಂದ್ರ, ಧರ್ಮಪುರ ಚಂದ್ರು, ಜಂಗಮಕೋಟೆ ನಾಗರಾಜ್ ಹಾಜರಿದ್ದರು.

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!