Home News ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಶ್ರದ್ಧಾಂಜಲಿ

ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಶ್ರದ್ಧಾಂಜಲಿ

0
Sidlaghatta Vasavi School S L Byrappa Tribute

Sidlaghatta : ಶಿಡ್ಲಘಟ್ಟ ನಗರದ ವಾಸವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಶುಕ್ರವಾರ ಕಸಾಪ ತಾಲ್ಲೂಕು ಘಟಕದ ವತಿಯಿಂದ ಎಸ್ ಎಲ್ ಭೈರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವಾಸವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರೂಪಸಿ ರಮೇಶ್ ಮಾತನಾಡಿ, ಭೈರಪ್ಪನವರು ಜೀವನದಲ್ಲಿ ಅನುಭವಿಸಿದ ಕಷ್ಟ ಕಾರ್ಪಣ್ಯಗಳನ್ನು ಸಾಹಿತ್ಯದ ಮೂಲಕ ಬಿಂಬಿಸಿದ್ದು, ಅವರ ಕಾದಂಬರಿಗಳು ಪ್ರತಿಯೊಬ್ಬರ ಜೀವನ ಸತ್ಯಗಳ ಅನಾವರಣ ಮಾಡಿವೆ. ರಾಷ್ಟ್ರದ ಎಲ್ಲ ಪ್ರಮುಖ ಭಾಷೆಗಳಲ್ಲಿ ಇವರ ಕೃತಿಗಳು ಭಾಷಾಂತರಗೊಂಡಿದೆ. ಕನ್ನಡ ನಾಡಿನ ಸಾಹಿತ್ಯದ ಹೆಮ್ಮರವಾಗಿ ಬೆಳೆದು ನಿಂತಿದ್ದಾರೆ ಎಂದರು.

ತಾಲ್ಲೂಕು ಕಸಾಪ ಅದ್ಯಕ್ಷ ನಾರಾಯಣಸ್ವಾಮಿ, ಕೃಷ್ಣ, ಎಸ್‌. ವಿ. ನಾಗರಾಜ ರಾವ್, ನರಸಿಂಹ ಮೂರ್ತಿ, ಸುಂದರ್, ಎಂ. ವೆಂಕಟ ಸ್ವಾಮಿ, ಮುನಿನಾರಾಯಣಪ್ಪ, ವಾಸವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹೇಶ್ ಬಾಬು, ಎಚ್. ಎಂ. ಶಿವಕುಮಾರ್, ನಾಗಭೂಷಣ್, ವಾಸವಿ ವಿದ್ಯಾಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version