Home News ವೀರರಾಣಿ ಒನಕೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮ

ವೀರರಾಣಿ ಒನಕೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮ

0

Sidlaghatta, chikkaballapur : ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸಗಳು ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ತಹಶೀಲ್ದಾರ್ ಗಗನಸಿಂಧು ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಚರಿಸಿದ ವೀರರಾಣಿ ಒನಕೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒರ್ವ ಕೋಟೆ ಕಾವಲುಗಾರನ ಹೆಂಡತಿಯಾಗಿ, ಕೋಟೆಗೆ ಆಪತ್ತು ಎದುರಾದಾಗ, ಸಮಯಪ್ರಜ್ಞೆಯಿಂದ ವೈರಿಗಳ ರುಂಡ ಚಂಡಾಡಿದ ವೀರ ವನಿತೆ ಓಬವ್ವ ಎಲ್ಲರಿಗೂ ಮಾದರಿಯಾಗಬೇಕು. ಹೆಣ್ಣುಮಕ್ಕಳು ಶೈಕ್ಷಣಿಕವಾಗಿ ಉತ್ತಮ ಪ್ರಗತಿ ಕಾಣಬೇಕು. ನಮ್ಮ ಕ್ಷೇತ್ರದ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದರೆ ನಮ್ಮಊರಿನ ಕೀರ್ತಿ ಹೆಚ್ಚುತ್ತದೆ ಎಂದರು.

ಶಿಕ್ಷಕ ಜಿ.ಎಂ.ಶ್ರೀನಿವಾಸ್ ಅವರು ಒನಕೆ ಓಬವ್ವ ಕುರಿತು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಇಪ್ಪತ್ತು ಮಂದಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಮುದಾಯದ ಹತ್ತು ಮಂದಿ ಹಿರಿಯರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿ ಸದಸ್ಯ ಲಕ್ಷ್ಮಣ್ ರಾಜು, ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ನಿರ್ದೇಶಕ ಟಿ.ಟಿ.ನರಸಿಂಹಪ್ಪ, ಜಿಲ್ಲಾಧ್ಯಕ್ಷ ತ್ಯಾಗರಾಜ್ ಬಿ.ಛಲವಾದಿ, ತಾಲ್ಲೂಕು ಉಪಾಧ್ಯಕ್ಷ ಬಿ.ಎಂ.ಬಾಬು, ಎಚ್.ಎನ್.ಮುನಿಯಪ್ಪ, ಜೈಭೀಮ್ ಸಂಘದ ಅರಿಕೆರೆ ಮುನಿರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್, ಸಿಡಿಪಿಒ ವಿದ್ಯಾ ವಸ್ತ್ರದ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಕಸಾಪ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ ಹಾಜರಿದ್ದರು.

For Daily Updates WhatsApp ‘HI’ to 7406303366

Namma Sidlaghatta WhatsApp Channel

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version