14.1 C
Sidlaghatta
Monday, December 22, 2025

ಶಿಡ್ಲಘಟ್ಟದ ಶ್ರೀ ವೇಣುಗೋಪಾಲಸ್ವಾಮಿಯ ರಥೋತ್ಸವ

- Advertisement -
- Advertisement -

ಶಿಡ್ಲಘಟ್ಟ ನಗರದ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರವೇ ನಗರದಲ್ಲಿ ಶುಭಕಾರ್ಯಗಳು ಪ್ರಾರಂಭವಾಗುವ ಸಂಪ್ರದಾಯವಿದೆ.

“ಊರದೇವರು” ಎಂದೇ ಪ್ರಸಿದ್ಧ­ವಾದ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಸಹಿತ ಎಲ್ಲ ಕೈಂಕರ್ಯಗಳು ಪಾಂಚರಾತ್ರಾಗಮ ಪದ್ಧತಿ­ಯಲ್ಲಿ ಸೋಮವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ದೇಗು­ಲದಲ್ಲಿ ಬೆಳಿಗ್ಗೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

 ಶಾಸಕ ವಿ.ಮುನಿಯಪ್ಪ ಮತ್ತು ಶಿರಸ್ತೆದಾರ್ ಮಂಜುನಾಥ್ ರಥೋತ್ಸವಕ್ಕೆ ಚಾಲನೆ ನೀಡಿ­ದರು. ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡರು. ತಮಟೆ ವಾದನ, ಮಂಗಳ ವಾದ್ಯಗಳ ಮಧ್ಯೆ ರಥವನ್ನು ಅಶೋಕ ರಸ್ತೆಯಲ್ಲಿ ಮೆರವಣಿಗೆ ಮಾಡ­­ಲಾಯಿತು. ಮಹಿಳೆಯರು ತೆಂಗಿನಕಾಯಿ ಒಡೆದು, ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಮಯೂರ ವೃತ್ತ­ದಲ್ಲಿ ಪಾನಕ ಮತ್ತು ಹೆಸರುಬೇಳೆ ಹಂಚಲಾಯಿತು.

 ವೇಣುಗೋಪಾಲಸ್ವಾಮಿ ದೇಗುಲ­ದಲ್ಲಿ ಪೂಜಾ ಕಾರ್ಯಕ್ರಮಗಳು ಒಂದು ವಾರದ ಕಾಲ ನಡೆಯಲಿದ್ದು, ನಗರದ ಎಲ್ಲ ಜಾತಿಯವರೂ ವಿವಿಧ ಕೈಂಕರ್ಯ­ಗಳಲ್ಲಿ ಭಾಗಿಯಾಗುವುದು ವಿಶೇಷ­ವಾಗಿದೆ.

ಅರ್ಚಕ ವೈ.ಎನ್‌.ದಾಶರಥಿಭಟ್ಟಾಚಾರ್ಯ, ದೇಗುಲ ಸಮಿತಿ ಸದಸ್ಯರು, ಶ್ರೀ ವೇಣುಗೋಪಾಲಸ್ವಾಮಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್‌ ಸದಸ್ಯರು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!