22 C
Sidlaghatta
Monday, October 13, 2025

ಶಿಡ್ಲಘಟ್ಟ ತಾಲ್ಲೂಕು ಕಸಾಪ ಅಧ್ಯಕ್ಷರ ಆಯ್ಕೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನಾರಾಯಣಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಚಿಕ್ಕಬಳ್ಳಾಪುರದ ನಂದಿ ರಂಗಮಂದಿರದಲ್ಲಿ ಶನಿವಾರ ಕಸಾಪ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ ಅವರು ನಿಕಟಪೂರ್ವ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಅವರಿಗೆ ಅಭಿನಂದನಾ ಪತ್ರವನ್ನು ಹಾಗೂ ನಾರಾಯಣಸ್ವಾಮಿ ಅವರಿಗೆ ನೂತನ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನೂ ನೀಡಿದರು.

ಶಿಡ್ಲಘಟ್ಟದ ತಾಲ್ಲೂಕು ಕಸಾಪ ಐದು ವರ್ಷದ ಅಧ್ಯಕ್ಷರ ಅವಧಿಯಲ್ಲಿ ಮೊದಲ ಎರಡು ವರ್ಷವನ್ನು ಬಿ.ಆರ್.ಅನಂತಕೃಷ್ಣ ಅವರಿಗೆ ಮತ್ತು ನಂತರದ ಮೂರು ವರ್ಷದ ಅವಧಿಯನ್ನು ನಾರಾಯಣಸ್ವಾಮಿ ಅವರಿಗೆ ನೀಡುವುದೆಂದು ಈ ಹಿಂದೆ ಒಡಂಬಡಿಕೆಯಾಗಿತ್ತು. ಅದರಂತೆ ವಿಭಿನ್ನ ರೀತಿಯಲ್ಲಿ ಕಸಾಪ ಮೂಲಕ ಅತಿ ಹೆಚ್ಚು ಕಾರ್ಯಕ್ರಮಗಳನ್ನು ಮಾಡಿರುವ ಬಿ.ಆರ್.ಅನಂತಕೃಷ್ಣ ಅವರಿಗೆ ಅಭಿನಂದನಾ ಪತ್ರವನ್ನು ನೀಡಿದರು. ನಾರಾಯಣಸ್ವಾಮಿ ಅವರೂ ಸಹ ನಿಕಟಪೂರ್ವ ಅಧ್ಯಕ್ಷರ ರೀತಿಯಲ್ಲಿ ಕಾರ್ಯಕ್ರಮಗಳನ್ನು ಮಾಡುವಂತೆ ಕಸಾಪ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ ಅವರು ತಿಳಿಸಿದರು.

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!