
ಶಿಡ್ಲಘಟ್ಟ ಗ್ರಾಮೀಣ ಭಾಗಗಳಲ್ಲಿ ಕೊರೊನ ಸೋಂಕಿತರ ಸಂಖ್ಯೆ ಹೆಚಾಗುತ್ತಿರುವ ಹಿನ್ನೆಯಲ್ಲಿ ತಹಶೀಲ್ದಾರ್ ರಾಜೀವ್ ಸೋಮವಾರ ಹೆಚ್ಚು ಪ್ರಕರಣಗಳು ದಾಖಲಾದ ಮೇಲೂರು ಮತ್ತು ಹಿತ್ತಲಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಕೊರೊನ ಹರಡದಂತೆ ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.
ಮೇಲೂರು ಗ್ರಾಮಪಂಚಾಯಿತಿ ಅಧ್ಯಕ್ಷ ಉಮೇಶ್, ಪಿ ಡಿ ಓ ಶಾರದಾ, ಅರೋಗ್ಯ ನಿರೀಕ್ಷಕ ದೇವರಾಜ್, ಹಿತ್ತಲಹಳ್ಳಿ ಗ್ರಾಮಪಂಚಾಯಿತಿ ಸದಸ್ಯ ವೆಂಕಟೇಶ್, ಪಿ ಡಿ ಓ ಕಾತ್ಯಾಯಿನಿ, ವೈದ್ಯ ಡಾ. ರಮೇಶ್, ಆಶಾ ಕಾರ್ಯಕರ್ತೆಯರು ಮತ್ತು ಅರೋಗ್ಯ ಸಿಬ್ಬಂದಿ ಹಾಜರಿದ್ದರು.