Home News ಕೋವಿಡ್ ಕುರಿತು ಪ್ರಗತಿ ಪರಿಶಿಲನಾ ಸಭೆ

ಕೋವಿಡ್ ಕುರಿತು ಪ್ರಗತಿ ಪರಿಶಿಲನಾ ಸಭೆ

0

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕೋವಿಡ್ 19 ಸಾಂಕ್ರಾಮಿಕ ರೋಗ ನಿಯಂತ್ರಣದ ಉದ್ದೇಶದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶಿಲನಾ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು ಹಾಗೂ ಪಿಡಿಒ ಗಳು ಯಾವುದೇ ಒತ್ತಡಗಳಿಗೆ ಮಣಿಯಬೇಡಿ. ಸರ್ಕಾರದ ಮಾರ್ಗಸೂಚಿಯಂತೆ ನೀವು ಕಾರ್ಯನಿರ್ವಹಿಸಿ. ಯಾವುದಾದರೂ ಅನ್ಯಾಯ ಕಂಡುಬಂದಲ್ಲಿ ತಕ್ಷಣ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಎಂದು ಅವರು ತಿಳಿಸಿದರು.
ಅಧಿಕಾರಿಗಳಿಗೆ ಈಗ ಹೆಚ್ಚಿನ ಜವಾಬ್ದಾರಿ ಇದೆ. ಕೋವಿಡ್ ಬಗ್ಗೆ ನಿರ್ಲ್ಯಕ್ಷ್ಯ ಮಾಡದೆ ಜವಾಬ್ದಾರಿಯಾಗಿ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿ, ತಾಲ್ಲೂಕಿನಲ್ಲಿ ಇದುವರೆಗೂ 6000 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, 170 ಮಂದಿಗೆ ಪಾಸಿಟೀವ್ ಬಂದಿದೆ. ಈಗ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ರ‍್ಯಾಪಿಡ್ ಆಂಟಿಜನ್ ಕಿಟ್ ಮೂಲಕ ಪ್ರತಿದಿನ ಕಡ್ಡಾಯವಾಗಿ ಕನಿಷ್ಠ 25 ಮಂದಿಗೆ ಪರೀಕ್ಷೆ ನಡೆಸುತ್ತಿದ್ದೇವೆ. ಎರಡು ಗ್ರಾಮ ಪಂಚಾಯಿತಿಗೆ ಮತ್ತು ನಗರದ ವಾರ್ಡುಗಳಿಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಿದ್ದೇವೆ.
ಟಾಸ್ಕ್ ಫೋರ್ಸ್ ಸದಸ್ಯರು ಅಥವಾ ಆಶಾ ಕಾರ್ಯಕರ್ತೆಯರು ಮನೆಗಳನ್ನು ವಿಂಗಡಿಸಿಕೊಂಡು ಜವಾಬ್ದಾರಿ ವಹಿಸಿಕೊಂಡ ಮನೆಗಳಿಗೆ ಕಡ್ಡಾಯವಾಗಿ ಹೋಗಿ ನೋಡಬೇಕು. ಆ ಮನೆಗಳಲ್ಲಿ ಬಾಣಂತಿಯರು ಎಷ್ಟು ಮಂದಿ, ಬಿಪಿ ಶುಗರ್ ಇರುವವರು ಯಾರು, ಡಯಾಲಿಸಿಸ್ ಮಾಡಿಸಿಕೊಳ್ಳುವವರು ಇದ್ದಾರಾ, ಹೃದಯ ಸಮಸ್ಯೆ ಇದೆಯಾ, ಬೇರೆ ಊರಿಗೆ ಹೋಗಿ ಬಂದು ಜ್ವರ ಕೆಮ್ಮು ನೆಗಡಿ ಬಂದಿದೆಯಾ, ಬೇರೆ ಊರಿನವರು ಬಂದಿದ್ದಾರಾ, ಮುಂತಾದ ಮಾಹಿತಿ ಪಡೆಯಬೇಕು. ಈ ಮಾಹಿತಿಯನ್ನು ನೋಡಲ್ ಅಧಿಕಾರಿ ಪಡೆಯಬೇಕು. ಈ ಕೆಲಸ ಶ್ರದ್ಧೆಯಿಂದ ಮಾಡಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ಇಒ ಶಿವಕುಮಾರ್, ವಿವಿಧ ಪಂಚಾಯಿತಿಗಳ ಆಡಳಿತಾಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.
 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

error: Content is protected !!