Home News ಮಹಾಯೋಗಿ ವೇಮನ ಜಯಂತಿ

ಮಹಾಯೋಗಿ ವೇಮನ ಜಯಂತಿ

0
Vemana Jayanthi Celebration sidlaghatta

ಜನಸಾಮಾನ್ಯರ ಕವಿಯಾದ ಯೋಗಿ ವೇಮನರು ಜಾತೀಯತೆ, ಅಂಧಶ್ರದ್ಧೆ, ಮೇಲು ಕೀಳುಗಳನ್ನು ತಮ್ಮ ಕಾವ್ಯದ ಮೂಲಕ ಧಿಕ್ಕರಿಸಿದವರು. ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಅವರು ಅಪೂರ್ವ ಸಮಾಜ ಸುಧಾರಕ ಎಂದು ಶಿರಸ್ತೆದಾರ್ ಮಂಜುನಾಥ್ ತಿಳಿಸಿದರು.

 ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ವೇಮನರ ಮಾತುಗಳು ಬರಿಯ ಮಾತುಗಳಲ್ಲ. ಅವುಗಳು ವೇದವೇ ಆಗಿವೆ. ನಮ್ಮ ಜನ ವೇಮನರ ಕುರಿತು, “ವೇದಾತೀತನು ವೇಮನು ಕಾಣಾ, ವೇಮನ ಮಾತದು ವೇದವು ಕಾಣಾ” ಎಂದು ಹಾಡಿದ್ದಾರೆ. ವೇಮನರ ಪದ್ಯಗಳು ಕನ್ನಡ, ತಮಿಳು, ಮಲೆಯಾಳಿ, ಇಂಗ್ಲಿಷ್ ಮುಂತಾದ ಭಾಷೆಗಳಿಗೆ ಅನುವಾದಗೊಂಡಿವೆ. ಹೀಗಾಗಿ ವೇಮನರ ಸಾಹಿತ್ಯ ಈ ಎಲ್ಲ ಭಾಷಾ ಸಾಹಿತ್ಯಗಳನ್ನು ಶ್ರೀಮಂತಗೊಳಿಸಿರುವುದಲ್ಲದೆ, ವಿಶ್ವ- ಸಾಹಿತ್ಯಕ್ಕೂ ಭೂಷಣಪ್ರಾಯವಾಗಿದೆ. ವೇಮನರ ತತ್ತ್ವ ಸಂದೇಶಗಳ ಜ್ಞಾನ ಮತ್ತು ಜಾಗೃತಿ ಜನರಲ್ಲಿ ಮೂಡಬೇಕು, ಶಾಂತಿ, ಸಮತೆ, ಸೌಹಾರ್ದತೆಯ ಪರಿಮಳ ಜನಮನದಲ್ಲಿ ಪಸರಿಸುವಂತಾಗಬೇಕು ಎನ್ನುವ ಉದಾತ್ತ ಧ್ಯೇಯದೊಂದಿಗೆ ವೇಮನರ ಜಯಂತ್ಯುತ್ಸವವನ್ನು ನಾಡಿನಾದ್ಯಂತ ಆಚರಿಸಲಾಗುತ್ತಿದೆ ಎಂದರು.

 ತಾಲ್ಲೂಕು ಕಚೇರಿ ಸಿಬ್ಬಂದಿ ಮಂಜುನಾಥ್, ಪ್ರಸಾದ್, ಲತಾ, ಶಿಕ್ಷಕ ನರಸಿಂಹರಾಜು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version