ಚಿನ್ನಾಭರಣ ಅಂಗಡಿ ಹಾಗೂ ಮೊಬೈಲ್ ಅಂಗಡಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರನ್ನು ಹಿಡಿದು ಥಳಿಸಿ ಪೋಲೀಸರಿಗೆ ಒಪ್ಪಿಸಿರುವ ಘಟನೆ ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿಡ್ಲಘಟ್ಟ ತಾಲ್ಲೂಕಿನ ವೈ ಹುಣಸೇನಹಳ್ಳಿ ಕ್ರಾಸ್ನ ಚಿನ್ನಾಭರಣ ಅಂಗಡಿ ಹಾಗೂ ಮೊಬೈಲ್ ಅಂಗಡಿ ಕಳ್ಳತನಕ್ಕೆ ಮಂಗಳವಾರ ಯತ್ನಿಸಿದ ಕಳ್ಳರನ್ನು ಅಂಗಡಿ ಮಾಲೀಕ ಸಿಸಿ ಟಿವಿ ಲೈವ್ ಮೂಲಕ ವೀಕ್ಷಿಸಿ, ಅಂಗಡಿ ಅಕ್ಕ ಪಕ್ಕದ ಮನೆಗಳವರಿಗೆ ವಿಷಯ ತಿಳಿಸಿದ ಹಿನ್ನಲೆಯಲ್ಲಿ, ಗ್ರಾಮಸ್ಥರು ಮೂವರನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಳ್ಳತನಕ್ಕೆ ಯತ್ನಿಸಿದ ಐವರ ಪೈಕಿ ಇಬ್ಬರು ತಪ್ಪಿಸಿಕೊಂಡಿದ್ದು ಉಳಿದ ಮೂವರನ್ನು ಗ್ರಾಮಸ್ಥರು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi