ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದವರನ್ನು ಶಿಕ್ಷಿಸಿ

- Advertisement -
- Advertisement -

ಆಶಾ ಕಾರ್ಯಕರ್ತೆಯ ಮೇಲಿನ ಹಲ್ಲೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ಮಂಗಳವಾರ ತಾಲ್ಲೂಕು ಆಡಳಿತಕ್ಕೆ ಹಾಗೂ ಪೊಲೀಸ್ ಇಲಾಖೆಗೆ ಮನವಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರು ನೀಡಿದರು.
ಕೋವಿಡ್ – 19 ಸೋಂಕಿನ ನಿಯಂತ್ರಣಕ್ಕಾಗಿ ಶಿಡ್ಲಘಟ್ಟ ತಾಲ್ಲೂಕಿನ ಗಂಜಿಗುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬಾಳೇಗೌಡನಹಳ್ಳಿ ಮತ್ತು ಗಂಗನಹಳ್ಳಿ ಗ್ರಾಮಗಳಲ್ಲಿ ಆಶಾ ಕಾರ್ಯಕರ್ತೆಯರು ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ವಿನಾಕಾರಣ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ರೀತಿ ದೌರ್ಜನ್ಯವೆಸಗಿದವರ ವಿರುದ್ಧ Disaster Management Act 2005 Section 51 & Section 188 ಅಡಿಯಲ್ಲಿ ಕಾನೂನು ಕ್ರಮ ಜರುಗಿಸಬೇಕೆಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಒತ್ತಾಯಿಸಿದರು.
ಈವರೆಗೆ ತಾಲ್ಲೂಕಿನಲ್ಲಿ ಎರಡು ಬಾರಿ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದಿದೆ. ತಮ್ಮ ಪ್ರಾಣವನ್ನು ಪಣಕ್ಕಿಟ್ಟು, ಇತರರ ಆರೋಗ್ಯ ರಕ್ಷಣೆಗೆಂದು ಸೇವೆ ಸಲ್ಲಿಸುವವರಿಗೆ ಸೂಕ್ತ ರಕ್ಷಣೆ ನೀಡಬೇಕು. ಎಷ್ಟೇ ಒತ್ತಡ ಬಂದರೂ ಪರಿಗಣಿಸದೆ ತಪ್ಪೆಸಗಿದವರಿಗೆ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ತಹಶೀಲ್ದಾರರಲ್ಲಿ ಮನವಿ ಮಾಡಿದರು.
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸುಬ್ಬಾರೆಡ್ಡಿ ಮಾತನಾಡಿ, ಸೋಮವಾರ ಗಂಗಹಳ್ಳಿ ಗ್ರಾಮದ ಆಶಾ ಕಾರ್ಯಕರ್ತೆಯಾದ ರವಣಮ್ಮ ಅವರು ಪೂಲಕುಂಟ್ಲಹಳ್ಳಿ ಗ್ರಾಮದಲ್ಲಿ ಸರ್ವೆ ಕಾರ್ಯದಲ್ಲಿ ನಿರತರಾಗಿದ್ದಾಗ ಪೂಲಕುಂಟ್ಲಹಳ್ಳಿ ಗ್ರಾಮದ ವ್ಶಕ್ತಿ ಕುಡಿದು ಹಲ್ಲೆ ಮಾಡಿದ್ದಾನೆ. ಅಡ್ಡ ಹೋದ ಆಕೆಯ ಗಂಡನನ್ನು ಕೂಡ ಹೊಡೆದಿದ್ದಾನೆ. ಇಬ್ಬರೂಚಿಂಚಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹಲ್ಲೆ ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು ಎಂದು ಆಗ್ರಹಿಸಿದರು.
ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರು ತಹಶೀಲ್ದಾರ್ ಕೆ.ಅರುಂಧತಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!