ಅತ್ಯಾಚಾರವೆಸಗಿರುವ ಕೊಲೆಗಡುಕರನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು

- Advertisement -
- Advertisement -

ನಗರದ ತಾಲ್ಲೂಕು ಕಚೇರಿ ಮುಂಭಾಗ ದಸಂಸ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಸಿ.ಎಂ.ಮುನೆಯ್ಯ ಮಾತನಾಡಿದರು.
ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಎಂಬ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕೊಲೆಗಡುಕರನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಅವರು ಆಗ್ರಹಿಸಿದರು.
ರಾಯಚೂರಿನ ಇಂಜನಿಯರಿಂಗ್ ವಿದ್ಯಾರ್ಥಿನಿ ಮಧು ಎಂಬ ಯುವತಿಯ ಹತ್ಯೆಯಿಂದ ಇಡೀ ರಾಜ್ಯವೇ ತಲೆ ತಗ್ಗಿಸುವಂತಾಗಿದೆ. ರಾಜ್ಯ ಹಾಗು ರಾಷ್ಟ್ರದಲ್ಲಿ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಅಮಾನವೀಯ ಕೃತ್ಯಗಳನ್ನು ತಡೆಯುವಲ್ಲಿ ಸರ್ಕಾರಗಳು ವಿಫಲವಾಗಿವೆ. ಸಮಾಜದಲ್ಲಿ ಹೆಣ್ಣು ಮಕ್ಕಳು ನಿರ್ಭೀತಿಯಿಂದ ಶಿಕ್ಷಣ ಪಡೆಯುವುದು ಸೇರಿದಂತೆ ಉದ್ಯೋಗ ಮತ್ತಿತರ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಇಂತಹ ಕೃತ್ಯಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸುವುದು ಹಾಗೂ ಮಧು ಎಂಬ ಯುವತಿಯನ್ನು ಹತ್ಯೆ ಮಾಡಿರುವ ಕೊಲೆಗಡುಕರನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಗ್ರೇಡ್ ೨ ತಹಸೀಲ್ದಾರ್ ವೈ.ಎಲ್.ಹನುಮಂತರಾವ್ ರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ದಸಂಸ ತಾಲ್ಲೂಕು ಸಂಚಾಲಕ ಎನ್.ಎ.ವೆಂಕಟೇಶ್, ಮುಖಂಡರಾದ ಕಾಚಹಳ್ಳಿ ಮುನಿಕೃಷ್ಣಪ್ಪ, ದೊಡ್ಡ ತಿರುಮಳಯ್ಯ, ರವಿಕುಮಾರ್, ಲಕ್ಷ್ಮಿನಾರಾಯಣ, ಕೃಷ್ಣಮೂರ್ತಿ, ಮತ್ತಿತರರು ಭಾಗವಹಿಸಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!