ತಾಲ್ಲೂಕಿನ ಹುಣಸೇನಹಳ್ಳಿ ಸ್ಟೇಷನ್ ಬಳಿ ಕಾರು ಜೆಸಿಬಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ನಗರದ ರಾಘವೇಂದ್ರ ಶಾಲೆಯ ಶಿಕ್ಷಕ ಎಲ್.ವಿ.ಪ್ರಸಾದ್(50) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅವರು ಅರಳೇಪೇಟೆಯ ವಾಸಿಯಾಗಿದ್ದರು. ಮೃತರ ಪತ್ನಿ ಶ್ಯಾಮಲಾ ಅವರು ಕೂಡ ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಜೊತೆಯಲ್ಲಿದ್ದ ಮಂಜುನಾಥ್ ಎಂಬುವವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







