ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ “ರಕ್ತಹೀನತೆಗೆ ಕಾರಣಗಳು, ವಿಟಮಿನ್ ಗಳ ಕೊರತೆಯಿಂದ ಬರುವ ಖಾಯಿಲೆಗಳು ಮತ್ತು ಪರಿಹಾರ”ದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲಾ ಸಂತಾನ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ.ಚನ್ನಕೇಶವರೆಡ್ಡಿ ಮಾತನಾಡಿದರು.
ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಆರೋಗ್ಯಕರ ಮಟ್ಟದಲ್ಲಿರುವುದು ಅತ್ಯಂತ ಅವಶ್ಯವಾಗಿದೆ. ನಿಗಧಿತ ಮಟ್ಟಕ್ಕಿಂತಲೂ ಕಡಿಮೆಯಾದರೆ ದೇಹ ಹಲವಾರು ತೊಂದರೆಗಳನ್ನು ಅನುಭವಿಸುತ್ತದೆ. ಕಬ್ಬಿಣ ಹೆಚ್ಚಿರುವ ಆಹಾರ, ಸರ್ಕಾರದಿಂದ ಶಾಲೆಗಳಲ್ಲಿ ನೀಡುವ ಮಾತ್ರೆಗಳನ್ನು ತೆಗೆದುಕೊಳ್ಳುವ ಮೂಲಕ ಈ ಕೊರತೆಯನ್ನು ನೀಗಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ವಿಟಮಿನ್ ಸಿ ಹೆಚ್ಚಿರುವ ಆಹಾರಗಳು, ಅದರಲ್ಲಿಯೂ ಮುಖ್ಯವಾಗಿ ಹಣ್ಣುಗಳನ್ನು ಸೇವಿಸುವುದು ಅಗತ್ಯವಾಗಿದೆ. ಅಲ್ಲದೇ ವಿಟಮಿನ್ ಸಿ ಇಲ್ಲದಿದ್ದರೆ ಕಬ್ಬಿಣವನ್ನು ನಮ್ಮ ದೇಹ ಅರಗಿಸಿಕೊಳ್ಳಲಾರದು. ಹಣ್ಣುಗಳಾದ ಪಪ್ಪಾಯಿ, ಕಿತ್ತಳೆ, ಲಿಂಬೆ, ದೊಣ್ಣೆಮೆಣಸು, ಚಕ್ಕೋತ, ಟೊಮೇಟೊ ಮತ್ತು ಪಾಲಕ್ ಸೊಪ್ಪುಗಳಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ. ಇದೆ. ಜೊತೆಗೆ ವೈದ್ಯರ ಸಲಹೆಯ ಮೇರೆಗೆ ಔಷಧಿಯ ರೂಪದಲ್ಲಿ ಲಭ್ಯವಿರುವ ವಿಟಮಿನ್ ಸಿ ಮಾತ್ರೆ ಅಥವಾ ಸಿರಪ್ ಗಳನ್ನೂ ಸೇವಿಸಬಹುದು ಎಂದು ಹೇಳಿದರು.
ಡಾ.ಕೀರ್ತಿ ಮಾತನಾಡಿ, ಸಿರಿಧಾನ್ಯಗಳಲ್ಲಿ ಹೆಚ್ಚು ಪೋಷಕಾಂಶಗಳು, ಹೆಚ್ಚು ಫೈಬರ್ ಅಂಶಗಳು ಮತ್ತು ಕಡಿಮೆ ಪ್ರಮಾಣದ ಗ್ಲೇಮಿಕ್ ಇಂಡೆಕ್ಸ್, ಹೆಚ್ಚು ಫೈಬರ್ ಅಂಶಗಳು ಇರುವುದರಿಂದ ಇವುಗಳು ಆರೋಗ್ಯಕ್ಕೆ ಪೂರಕವಾಗಿದೆ. ಆರೋಗ್ಯ ವೃದ್ಧಿಗೆ ಪೂರಕವಾಗುವ ಸಿರಿಧಾನ್ಯಗಳನ್ನು ಬಳಸಿ ಎಂದು ವಿವರಿಸಿದರು.
ಡಾ.ಫಣೀಂದ್ರ ಸ್ವಚ್ಛತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಎ.ಎಂ.ತ್ಯಾಗರಾಜ್, ಮುಖ್ಯ ಶಿಕ್ಷಕಿ ಎಂ.ವಿ.ವೆಂಕಟರತ್ನಮ್ಮ, ಶಿಕ್ಷಕರಾದ ಎಸ್.ಚಾಂದ್ ಪಾಷ, ಅಶೋಕ್, ಭಾರತಿ, ಸಿಬ್ಬಂದಿ ವೆಂಕಟಮ್ಮ ಹಾಜರಿದ್ದರು.
- Advertisement -
- Advertisement -
- Advertisement -







