28.2 C
Sidlaghatta
Saturday, February 21, 2026

ಐಟಿಐ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ

- Advertisement -
- Advertisement -

ವಿದ್ಯಾರ್ಥಿ ದೆಸೆಯಲ್ಲೇ ಮುಂದಿನ ಗುರಿಯನ್ನು ರೂಪಿಸಿಕೊಂಡಾಗ ಮಾತ್ರ ಉಜ್ವಲ ಭವಿಷ್ಯ ಎದುರುಗೊಳ್ಳುತ್ತದೆ ಎಂದು ಕೆನರಾ ಬ್ಯಾಂಕ್ ಮೇಲೂರು ಶಾಖೆಯ ಪ್ರಬಂಧಕರಾದ ಇಂದು ಪಾಟೀಲ್ ತಿಳಿಸಿದರು.
ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಕಾಲೇಜಿನಲ್ಲಿ ಗುರುವಾರ ಕೆನರಾ ಬ್ಯಾಂಕ್ ಮೇಲೂರು ಮತ್ತು ಶಿಡ್ಲಘಟ್ಟ ಶಾಖೆಗಳ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಡೆಸಿದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ನಂತರದ ದಿನಗಳಲ್ಲಿ ಸ್ವಂತ ಉದ್ಯೋಗ ಪ್ರಾರಂಭಿಸಬೇಕಿರುವ ಉದ್ದೇಶಕ್ಕೆ ಪೂರಕವಾಗಿ ಹಲವಾರು ಮಾಹಿತಿಯನ್ನು ಹೊಂದಿರಬೇಕಾಗುತ್ತದೆ. ಹಣಕಾಸು, ಮಾರುಕಟ್ಟೆ, ತಾಂತ್ರಿಕ ಪರಿಣತಿ ಮುಂತಾದ ವಿಷಯಗಳನ್ನು ತಿಳಿದುಕೊಳ್ಳುವಂತೆ ಹೇಳಿದರು.
ಐಟಿಐ ದಿನಾಚರಣೆಯ ಅಂಗವಾಗಿ ಮುದ್ರಾ ಯೋಜನೆ ಕುರಿತಂತೆ ಹಾಗೂ ಕೈಗಾರಿಕಾ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬ್ಯಾಂಕಿನಿಂದ ಸಿಗುವ ಸೌಲಭ್ಯಗಳ ಕುರಿತಂತೆ ಮಾಹಿತಿಯನ್ನು ನೀಡಲಾಯಿತು.
ಉಪಪ್ರಾಂಶುಪಾಲ ಶ್ರೀನಿವಾಸ್, ಕೆನರಾ ಬ್ಯಾಂಕ್ ಶಿಡ್ಲಘಟ್ಟ ಶಾಖೆಯ ಅಧಿಕಾರಿ ಎಂ.ಮುನಿಲಕ್ಷ್ಮಮ್ಮ, ಆರ್ಥಿಕ ಸಾಕ್ಷರತಾ ಕೇಂದ್ರದ ಸಲಹಾಗಾರ ಎಂ.ಜಿ.ಗಂಗರಾಮಯ್ಯ, ಕಿರಿಯ ತರಬೇತಿ ಅಧಿಕಾರಿ ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!