18 C
Sidlaghatta
Monday, February 23, 2026

ಕ.ಸಾ.ಪ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ

- Advertisement -
- Advertisement -

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ, ತಾಲ್ಲೂಕು ಮತ್ತು ಹೋಬಳಿ ಘಟಕಗಳ ಉದ್ಘಾಟನೆ ಮತ್ತು ನೂತನ ಅಧ್ಯಕ್ಷರಿಗೆ ಅಭಿನಂದನಾ ಸಮಾರಂಭವನ್ನು ಮೇ 22 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಶ್ರೀ ನಗರೇಶ್ವರಸ್ವಾಮಿ ಕಲ್ಯಾಣಮಂಟಪದಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎಂ.ರಾಜಣ್ಣನವರು ನೆರವೇರಿಸಲಿದ್ದಾರೆ. ಪ್ರಧಾನ ಭಾಷಣಕಾರರಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನಿಗಳಾದ ಹರೀಶ್ ಆರ್.ಭಟ್ ಆಗಮಿಸಲಿದ್ದು, ‘ಸಾಹಿತ್ಯದಲ್ಲಿ ವಿಜ್ಞಾನ ಮತ್ತು ಪರಿಸರ’ ವಿಷಯವಾಗಿ ಉಪನ್ಯಾಸವನ್ನು ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ಸಾ.ಪ ತಾಲ್ಲೂಕು ಅಧ್ಯಕ್ಷ ಬಿ.ಆರ್. ಅನಂತಕೃಷ್ಣ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕ.ಸಾ.ಪ ಅಧ್ಯಕ್ಷ ಎನ್.ಶ್ರೀನಿವಾಸ್, ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ, ನಗರಸಭೆ ಅಧ್ಯಕ್ಷೆ ಮುಷ್ಠರಿ ತನ್ವೀರ್ಪಾಷ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜರಾವ್, ಜಿಲ್ಲಾ ಕ.ಸಾ.ಪ ನಿಕಟಪೂರ್ವ ಅಧ್ಯಕ್ಷ ವೈ.ಎಲ್.ಹನುಮಂತರಾವ್, ಮಾಜಿ ಜಿಲ್ಲಾಧ್ಯಕ್ಷ ಎಸ್.ವಿ.ನಾಗರಾಜರಾವ್, ತಾಲ್ಲೂಕು ನಿಕಟಪೂರ್ವ ಅಧ್ಯಕ್ಷ ಕೃ.ನಾ.ಶ್ರೀನಿವಾಸಮೂರ್ತಿ ಭಾಗವಹಿಸುವರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!