ಕಂದಾಯ ಹಾಗೂ ಪಿಂಚಣಿ ಅದಾಲತ್

- Advertisement -
- Advertisement -

ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹೋಬಳಿ ಮಟ್ಟದ ಅಟಲ್ಜೀ ಜನಸ್ನೇಹಿ ಕೇಂದ್ರಗಳಲ್ಲಿ ಕಂದಾಯ ಹಾಗು ಪಿಂಚಣಿ ಅದಾಲತ್ ಆಯೋಜಿಸಲಾಗಿದ್ದು ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಂಗಮಕೋಟೆ ನಾಡಕಚೇರಿಯ ಉಪತಹಸೀಲ್ದಾರ್ ಮುನಿಕೃಷ್ಣಪ್ಪ ಹೇಳಿದರು.
ತಾಲ್ಲೂಕಿನ ಜಂಗಮಕೋಟೆ ಗ್ರಾಮದಲ್ಲಿ ಸೋಮವಾರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ ಹಾಗು ಪಿಂಚಣಿ ಅದಾಲತ್ನಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನಾಧ್ಯಂತ ಇರುವ ನಾಲ್ಕು ಹೋಬಳಿಗಳ ವಿವಿಧ ಗ್ರಾಮಗಳಲ್ಲಿ ಒಂದು ತಿಂಗಳ ಕಾಲ ಅದಾಲತ್ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಆಯಾ ಹೋಬಳಿಗೆ ಅಧಿಕಾರಿಗಳು ಬಂದಾಗ ಸಾರ್ವಜನಿಕರು ಸೂಕ್ತ ದಾಖಲೆಗಳ ಸಮೇತ ಹಾಜರಾದಲ್ಲಿ ಸ್ಥಳದಲ್ಲಿಯೇ ಅವರ ಸಮಸ್ಯೆ ಬಗೆಹರಿಸಲು ಸಹಕಾರಿಯಾಗುತ್ತದೆ. ಇದರಿಂದ ಸಾರ್ವಜನಿಕರು ವಿನಾಕಾರಣ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿದಂತಾಗುತ್ತದೆ ಎಂದರು.
ಸಂದ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿ ಸೌಲಭ್ಯ ಪಡೆಯಲು ೭ ಅರ್ಜಿ, ವಿಧವಾ ವೇತನಕ್ಕಾಗಿ ೬ ಅರ್ಜಿ, ಅಂಗವಿಕಲ ಮಾಸಾಶನಕ್ಕಾಗಿ ೧ ಅರ್ಜಿ ಹಾಗು ಆರ್.ಆರ್.ಟಿ ೩ ಮತ್ತು ೯ ರ ಕಾಲಂ ತಿದ್ದುಪಡಿಗಾಗಿ ೮ ಅರ್ಜಿ, ಅಮಶಾನ ಒತ್ತುವರಿಗೆ ಸಂಬಂದಿಸಿದಂತೆ ೧ ಅರ್ಜಿ ಸಲ್ಲಿಕೆಯಾಗಿವೆ.
ಗ್ರಾಮ ಪಂಚಾಯತಿ ಅಧ್ಯಕ್ಷೆ ರೆಹಮತ್ಜಾನ್, ಉಪಾಧ್ಯಕ್ಷ ನಾರಾಯಣಸ್ವಾಮಿ, ಸದಸ್ಯರಾದ ಸೈಯ್ಯದ್ ಅನ್ವರ್ಪಾಷ, ಅಶ್ವತ್ಥಪ್ಪ, ಜಂಗಮಕೋಟೆ ರಾಜಸ್ವ ನಿರೀಕ್ಷಕ ಮೋಹನ್ಕುಮಾರ್, ಗ್ರಾಮ ಲೆಕ್ಕಿಗ ಅಮರೇಂದ್ರ, ಮುಖಂಡರಾದ ಮುನಿರೆಡ್ಡಿ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!