ಕನ್ನಡ ಭಾಷೆಯನ್ನು ಹೃದಯದಿಂದ ಪ್ರೀತಿಸಿ

- Advertisement -
- Advertisement -

ಕನ್ನಡ ಭಾಷೆಯನ್ನು ಹೃದಯದಿಂದ ಪ್ರೀತಿಸಿ. ಕನ್ನಡ ನಾಡಿನಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರು ಕನ್ನಡವನ್ನು ಪ್ರೀತಿಸಿ, ಗೌರವಿಸುವ ಅಗತ್ಯ ಇದೆ ಎಂದು ಜಂಗಮಕೋಟೆ ಪೋಲಿಸ್ ಠಾಣೆಯ ಎಎಸ್ಐ ನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆ ಕ್ರಾಸ್ ಮತ್ತು ಜಂಗಮಕೋಟೆ ವೃತ್ತದಲ್ಲಿ ಜೈ ಭಾರತ ಮಾತೇ ಆಟೋ ಚಾಲಕರ ಹಾಗೂ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳು ತಾಯಿ, ತಂದೆ, ಗುರುಗಳನ್ನು ನೆನೆಯುವಂತಹ ಕೆಲಸ ಮಾಡಬೇಕು. ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಂಡು ಬದುಕು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಜೀವನದಲ್ಲಿ ಉತ್ತಮ ಗುಣಗಳನ್ನು ರೂಪಿಸಿಕೊಳ್ಳಲಾಗದೆ ಹೋದರೆ ಜೀವನದಲ್ಲಿ ಎಂದಿಗೂ ಉತ್ತಮ ವ್ಯಕ್ತಿಗಳಾಗಲು ಸಾಧ್ಯವಿಲ್ಲ. ಶಿಕ್ಷಣ ಸಂಸ್ಥೆಗಳು ಮಕ್ಕಳು ಸಂಸ್ಕಾರವಂತರನ್ನಾಗಿ, ಪ್ರಜ್ಞಾವಂತರನ್ನಾಗಿ ಮಾಡಬೇಕಾಗಿದೆ. ತಂದೆ, ತಾಯಿಗಳಿಗೆ ನೀಡುವಂತಹ ಗೌರವವನ್ನು ನಮ್ಮ ಭಾಷೆಗೂ ನೀಡಬೇಕು. ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರುಗಳ ಚರಿತ್ರೆಗಳನ್ನು ತಿಳಿದುಕೊಳ್ಳುವಂತಹ ಪ್ರಯತ್ನ ಮಕ್ಕಳು ಮಾಡಬೇಕು ಎಂದರು.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮುನಿರಾಜು(ಕುಟ್ಟಿ) ಮಾತನಾಡಿ, ಸಮೃದ್ಧ ನಾಡನ್ನು ಕಟ್ಟಲು ಶ್ರಮಿಸಿದ ನಾಡಿನ ಕವಿಗಳು, ಕಲಾವಿದರು, ಸಾಹಿತಿಗಳು, ಸಂತರು ಹಾಗೂ ಕರ್ನಾಟಕದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ ಎಲ್ಲಾ ಗಣ್ಯಮಾನ್ಯರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಪಿ.ಡಿ.ಓ ವಜ್ರೇಶ್, ಗ್ರಾಮ ಪಂಚಾಯಿತಿ ಸದಸ್ಯ ಜೆ.ಎಂ.ವೆಂಕಟೇಶ್, ಗ್ರಾಮಸ್ಥರಾದ ಮುನಿರಾಜು, ಮುನ್ಸಿರ್, ಮಂಜುನಾಥ್, ಜೈ ಭಾರತ ಮಾತೇ ಆಟೋ ಚಾಲಕರ ಹಾಗೂ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಕೃಪಾನಂದ, ಅಫ್ಸರ್, ದಾದಾಪೀರ್, ನಾಗರಾಜು, ರಾಮು, ವೆಂಕಟೇಶ್ ಹಾಜರಿದ್ದರು.
 

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!