22.1 C
Sidlaghatta
Wednesday, February 11, 2026

ಕನ್ನಡ ಸಾಹಿತ್ಯ ಪರಿಷತ್ ಗೆ ಉದಾರವಾಗಿ ದತ್ತಿಗಳನ್ನು ನೀಡಿ

- Advertisement -
- Advertisement -

ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ಗೆ ಉದಾರವಾಗಿ ದತ್ತಿಗಳನ್ನು ನೀಡಿದಲ್ಲಿ ನಿರಂತರವಾಗಿ ಅವರುಗಳ ಹೆಸರಿನಲ್ಲಿ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ತಿಳಿಸಿದರು.
ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಗೌರವ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈಗಾಗಲೇ ಹಲವು ದಾನಿಗಳ ದತ್ತಿಗಳ ಮೂಲಕ ಪ್ರತಿ ವರ್ಷ ಕಾರ್ಯಕ್ರಮಗಳು ನಡೆಯುತ್ತಿವೆ. ಸಂಘ ಸಂಸ್ಥೆಗಳ ಹೆಸರಿನಲ್ಲಿ ಅಥವಾ ತಮ್ಮ ಕುಟುಂಬದ ಹಿರಿಯರ ಹೆಸರಿನಲ್ಲಿ ದತ್ತಿ ದಾನಿಗಳು ಉದಾರವಾಗಿ ಹಣ ನೀಡಿದಲ್ಲಿ, ಅದರ ಬಡ್ಡಿ ಹಣದಿಂದ ಪ್ರತಿ ವರ್ಷ ಅರ್ಥಪೂರ್ಣ ಕಾರ್ಯಕ್ರಮಗಳನ್ನು ನಡೆಸಬಹುದು. ಪ್ರಶಸ್ತಿಗಳನ್ನು ನೀಡಬಹುದು ಎಂದು ಹೇಳಿದರು.
ಗ್ರಾಮಾಂತರ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಪ್ರತಿಯೊಂದು ಕುಟುಂಬದವರೂ ಕ.ಸಾ.ಪ ಸದಸ್ಯತ್ವವನ್ನು ಪಡೆಯುವ ಮೂಲಕ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕು ಎಂದು ಕೋರಿದರು.
ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳಾದ ಸುಧೀರ್, ಸುದರ್ಶನ್, ಎಸ್.ಆರ್.ಶ್ರೀನಿವಾಸ್, ಮುನಿಕೃಷ್ಣಪ್ಪ, ರೂಪೇಶ್, ಶಿವಾನಂದ, ರಾಘವೇಂದ್ರ, ಆನಂದ್, ಮಂಜುನಾಥ್, ಸುರೇಶ್, ಸಚಿನ್, ಬಚ್ಚೇಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!