ಶಿಡ್ಲಘಟ್ಟ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಾರ್ಚ್ ೧೦ ರಂದು ಆಯೋಜನೆ ಮಾಡಲಾಗಿರುವ ೬ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಛಾಯಾಗ್ರಾಹಕ ಡಿ.ಜಿ.ಮಲ್ಲಿಕಾರ್ಜುನ ಅವರನ್ನು ಆಯ್ಕೆ ಮಾಡಲಾಗಿದ್ದು ಶಾಸಕ ಎಂ.ರಾಜಣ್ಣ ಅವರು ಅಧಿಕೃತವಾಗಿ ಆಹ್ವಾನ ನೀಡಿದರು.
ನಗರದ ೧೧ ನೇ ವಾರ್ಡಿನಲ್ಲಿರುವ ಮಲ್ಲಿಕಾರ್ಜುನ ಅವರ ಸೃಗೃಹಕ್ಕೆ ಬೇಟಿ ನೀಡಿದ್ದ ಅವರು, ೬ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಶಾಲುಹೊದಿಸಿ ಸನ್ಮಾನ ಮಾಡುವ ಮೂಲಕ ಆಹ್ವಾನ ನೀಡಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಎಸ್.ವಿ.ನಾಗರಾಜರಾವ್, ಮಾಜಿ ತಾಲ್ಲೂಕು ಅಧ್ಯಕ್ಷ ಕೃಷ್ಣ, ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಬಿ.ಸಿ.ನಂದೀಶ್, ಡಿ.ಎಂ.ಜಗದೀಶ್ವರ್, ಉರಗತಜ್ಞ ಕೊತ್ತನೂರು ನಾಗರಾಜ್, ಎ.ಎಂ.ತ್ಯಾಗರಾಜ್, ದೇವರಾಜ್ ಮುಂತಾದವರು ಹಾಜರಿದ್ದರು.
- Advertisement -
- Advertisement -
- Advertisement -







