ಕರಾಟೆಯಲ್ಲಿ ಪದಕಗಳನ್ನು ಗೆದ್ದ ನಗರದ ಮಕ್ಕಳು

- Advertisement -
- Advertisement -

ಕರಾಟೆ ಕಲಿಯುವುದರಿಂದ ಬರೀ ಆತ್ಮರಕ್ಷಣೆಯಷ್ಟೇ ಅಲ್ಲದೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಕೊಳ್ಳಬಹುದು ಎಂದು ರಾಯಲ್ ಟ್ವೆಕೊಂಡೊ ಕರಾಟೆ ತರಭೇತಿ ಶಾಲೆಯ ತರಬೇತುದಾರ ಮುನಿಕೃಷ್ಣಪ್ಪ ಹೇಳಿದರು.
ನಗರದ ಕೋಟೆ ವೃತ್ತದ ಶಾಲಾವರಣದಲ್ಲಿ ನಡೆಯುತ್ತಿರುವ ರಾಯಲ್ ಟ್ವೆಕೊಂಡೊ ಕರಾಟೆ ತರಬೇತಿ ಶಾಲೆಯ ಮಕ್ಕಳು ಇತ್ತೀಚೆಗೆ ಬೆಂಗಳೂರಿನ ಗುಂಡೂರಾವ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಟ್ವೆಕೊಂಡೊ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳನ್ನು ಅಭಿನಂದಿಸಿ ಅವರು ಮಾತನಾಡಿದರು.
ಕರಾಟೆಯನ್ನು ಕಲಿಯುವುದರಿಂದ ಮಾನಸಿಕವಾದ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳುವುದರ ಜೊತೆಗೆ, ಆತ್ಮರಕ್ಷಣೆಗೂ ಅನುಕೂಲವಾಗುತ್ತದೆ. ವಿಶೇಷವಾಗಿ ಹೆಣ್ಣು ಮಕ್ಕಳು ಸ್ವರಕ್ಷಣೆಗಾಗಿ ಕರಾಟೆಯನ್ನು ಕಲಿಯುವುದರಿಂದ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಹಾಗೂ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಶಿಡ್ಲಘಟ್ಟದ ರಾಯಲ್ ಟ್ವೆಕೊಂಡೊ ಕರಾಟೆ ಶಾಲೆಯ ೨೬ ಮಂದಿ ಮಕ್ಕಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ೨೩ ಚಿನ್ನ ಹಾಗೂ ೦೩ ಬೆಳ್ಳಿ ಪದಕಗಳನ್ನು ಪಡೆದು ವಿಜೇತರಾಗಿದ್ದಾರೆ.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!