ಕರೋನಾ ಪರಿಣಾಮ : ರಕ್ತನಿಧಿ ಕೇಂದ್ರದಲ್ಲಿ ರಕ್ತದ ಅಭಾವ

- Advertisement -
- Advertisement -

ಕರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಸಭೆ, ಸಮಾರಂಭ, ಮದುವೆ, ಜಾತ್ರೆ ಮುಂತಾದ ಜನಸೇರುವ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲು ಆದೇಶಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿಲ್ಲ. ಇದರಿಂದ ಜಿಲ್ಲೆಯ ಆಸ್ಪತ್ರೆಗಳಲ್ಲಿ ರಕ್ತದ ಕೊರತೆಯುಂಟಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಗುರುರಾಜರಾವ್ ತಿಳಿಸಿದ್ದಾರೆ.
ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಲವು ರಕ್ತದಾನ ಶಿಬಿರಗಳನ್ನು ಆಯೋಜಿಸಲಿದ್ದೆವು. ಅವೆಲ್ಲಾ ಮುಂದೂಡಲಾಗಿದೆ. ಹಾಗಾಗಿ ಈಗ ರಕ್ತದ ಕೊರತೆಯನ್ನು ಎದುರಿಸುತ್ತಿದ್ದೇವೆ.
ಚಿಕ್ಕಬಳ್ಳಾಪುರ ರಕ್ತ ನಿಧಿ ಕೇಂದ್ರಕ್ಕೆ ಒಂದು ತಿಂಗಳಿಗೆ ಒಂದು ಸಾವಿರ ಯೂನಿಟ್ ಗಳ ರಕ್ತದ ಅವಶ್ಯಕತೆಯಿದೆ. ಅಂದರೆ ಪ್ರತಿ ದಿನವೂ 30 – 40 ಯೂನಿಟ್ ಗಳ ಬೇಡಿಕೆಯಿದೆ. ಆದರೆ, ಕರೋನಾ ಭೀತಿಯಿಂದಾಗಿ ರಕ್ತದಾನ ಶಿಬಿರಗಳು ಮೂಂದೂಡುತ್ತಿದ್ದು, ರಕ್ತದ ಅಭಾವ ಉಂಟಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ರಕ್ತದಾನಿಗಳು ಚಿಕ್ಕಬಳ್ಳಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಕ್ತ ನಿಧಿ ಕೇಂದ್ರಕ್ಕೆ ಬಂದು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿ. ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ರಕ್ತ ನಿಧಿ ಕೇಂದ್ರ ತೆರೆದಿರುತ್ತದೆ. ರಕ್ತದಾನ ಮಾಡಿ ಜೀವ ಉಳಿಸಿ ಎಂದು ಅವರು ಮನವಿ ಮಾಡಿದ್ದಾರೆ.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!