27.6 C
Sidlaghatta
Sunday, March 1, 2026

ಕೋಚಿಮುಲ್ ನಿಂದ ಸಂಜೀವಿನಿ ಯೋಜನೆಯಡಿ ಹಣದ ಚೆಕ್ ಹಂಚಿಕೆ

- Advertisement -
- Advertisement -

ಕೋಚಿಮುಲ್ ಹಾಲು ಒಕ್ಕೂಟದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಹಾಲು ಉತ್ಪಾದಕರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಮುಂದುವರೆಯಬೇಕು ಎಂದು ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು.
ನಗರದ ಕೋಚಿಮುಲ್ ಶಿಬಿರ ಘಟಕದ ಕಚೇರಿಯ ಆವರಣದಲ್ಲಿ ಕನಕನಗರದ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಒಕ್ಕೂಟದ ಸಂಜೀವಿನಿ ಯೋಜನೆಯಡಿ ಹಂಚಿಕೆ ಹಣದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹಾಲು ಮತ್ತು ರೇಷ್ಮೆಯಿಂದ ಜೀವನ ನಡೆಸುತ್ತಿರುವ ಈ ಭಾಗದ ರೈತರು ಹೈನುಗಾರಿಕೆಯನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ. ಹಾಲು ಉತ್ಪಾದಕರಿಗಾಗಿ ಒಕ್ಕೂಟದಿಂದ ವಿವಿಧ ಸವಲತ್ತುಗಳನ್ನು ನೀಡುತ್ತಿದ್ದು ಸ್ವಂತ ಡೈರಿ ಕಟ್ಟಡ ನಿರ್ಮಾಣ ಸೇರಿದಂತೆ ಡೈರಿಗಳಿಗೆ ಕಂಪ್ಯೂಟರ್, ಹಾಲು ಉತ್ಪಾದಕರಿಗೆ ವಿಮೆ ಯೋಜನೆ, ರಾಸುಗಳ ಕೆಳ ಹಾಕುವ ಮ್ಯಾಟ್ ಸೇರಿದಂತೆ ವಿವಿಧ ಪರಿಕರಗಳನ್ನು ಒಕ್ಕೂಟ ವಿತರಿಸುತ್ತಿದೆ. ಒಕ್ಕೂಟದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಮುಂದುವರೆಯುವ ಜೊತೆಗೆ ಉತ್ತಮ ಗುಣಮಟ್ಟದ ಹಾಲು ಉತ್ಪಾದನೆ ಮಾಡಿ ಒಕ್ಕೂಟಕ್ಕೆ ಸರಬರಾಜು ಮಾಡಬೇಕು ಎಂದರು.
ಶಿಬಿರ ಘಟಕದ ಉಪವ್ಯವಸ್ಥಾಪಕ ಡಾ.ಚಂದ್ರಶೇಖರ್ ಮಾತನಾಡಿ, ಹಾಲು ಉತ್ಪಾದಕರು ಕಳಪೆ ಗುಣಮಟ್ಟದ ಹಾಲನ್ನು ಡೈರಿಗಳಿಗೆ ಪೂರೈಕೆ ಮಾಡಬಾರದು. ಪ್ರತಿಯೊಬ್ಬ ಉತ್ಪಾದಕರು ತಮ್ಮ ರಾಸುಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು. ಎಲ್ಲೆಡೆ ಕಾಲುಬಾಯಿ ಜ್ವರಗಳು ಹರಡುತ್ತಿರುವ ಬಗ್ಗೆ ವರದಿಗಳಾಗುತ್ತಿವೆ. ಉತ್ಪಾದಕರು ಭಯಪಡುವಂತಹ ಅಗತ್ಯವಿಲ್ಲ, ರೋಗಗಳನ್ನು ನಿಯಂತ್ರಣ ಮಾಡಲಿಕ್ಕೆ ಅಗತ್ಯವಾಗಿರುವ ಔಷಧಿಗಳನ್ನು ನೀಡಲು ಇಲಾಖೆ ಸಿದ್ಧವಾಗಿದೆ. ರೈತರು ರೋಗಗಳು ಬರುವ ಮುನ್ನಾ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಉತ್ತಮ ಎಂದರು.
ಈ ಸಂದರ್ಭದಲ್ಲಿ ನಗರದ ಕನಕನಗರದ ಹಾಲು ಉತ್ಪಾದಕರ ಸಹಕಾರ ಸಂಘದ ೧೦ ಮಂದಿ ಫಲಾನುಭವಿಗಳಿಗೆ ತಲಾ ೨೦ ಸಾವಿರ ರೂಗಳಂತೆ ಚೆಕ್ಕುಗಳನ್ನು ವಿತರಿಸಲಾಯಿತು.
ಉಪವ್ಯವಸ್ಥಾಪಕ ನಾರಾಯಣಸ್ವಾಮಿ, ವಿಸ್ತರಣಾಧಿಕಾರಿಗಳಾದ ಉಮೇಶ್‌ರೆಡ್ಡಿ, ನರಸಿಂಹಯ್ಯ, ಗುಲಾಬ್ ಜಾನ್, ಶಂಕರ್‌ಕುಮಾರ್, ಕುಮ್ಮಣ್ಣ, ಚಿಕ್ಕಮುನಿಯಪ್ಪ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!