20.1 C
Sidlaghatta
Thursday, October 30, 2025

ಗುರುಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ

- Advertisement -
- Advertisement -


ಅಂದಾಜು ಒಂದು ಕೋಟಿ ರೂಗಳ ವೆಚ್ಚದಲ್ಲಿ ಸುಸಜ್ಜಿತ ಗುರುಭವನ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ.ರಾಜಣ್ಣ ಭರವಸೆ ನೀಡಿದರು.
ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬುಧವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಗುರುಭವನ ಸಮಿತಿ ಸಂಯುಕ್ತಾಶ್ರಯದಲ್ಲಿ ಗುರುಭವನದ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ವಿವಿಧ ಮೂಲಗಳಿಂದ ಹಣವನ್ನು ಕ್ರೋಡಿಕರಿಸಿ ಸುಸಜ್ಜಿತ ಗುರುಭವನ ನಿರ್ಮಾಣ ಮಾಡಲು ಅಗತ್ಯ ಕ್ರಮ ವಹಿಸಲಾಗಿದೆ. ಗುರುಭವನವು ಶಿಕ್ಷಕರ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಅದರ ಮೂಲಕ ತಾಲ್ಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಉತ್ತಮಪಡಿಸಲು ಸಹಕಾರಿಯಾಗುವಂತೆ ನೋಡಿಕೊಳ್ಳಬೇಕು. ಆದಷ್ಟು ಶೀಘ್ರವಾಗಿ ಕಾಮಗಾರಿಗಳು ನಡೆಯುವಂತೆ ಗುರುಭವನ ಸಮಿತಿ ಸದಸ್ಯರು ಶ್ರಮಿಸಬೇಕು ಹಾಗೂ ಶಿಕ್ಷಕರು ಸರ್ವರೀತಿಯಲ್ಲೂ ನೆರವಾಗಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಮಾತನಾಡಿ, ಶಿಕ್ಷಕರಿಗೆ ನೆರವಾಗುವ ಹಾಗೂ ಶೈಕ್ಷಣಿಕ ಸಂಬಂಧಿಸಿದ ಕಾರ್ಯಕ್ರಮಗಳು ಗುರುಭವನದಲ್ಲಿ ನಡೆಯುವಂತಾಗಬೇಕು ಎಂಬ ಆಶಯವಿದೆ. ಶಿಕ್ಷಕರ ಸಮಾವೇಶ, ಕಾರ್ಯಾಗಾರ, ತರಬೇತಿ, ಮದುವೆ, ನಾಮಕರಣಕ್ಕೂ ಬಳಕೆಯಾಗಬೇಕು. ಸಾರ್ವಜನಿಕರ ಅನುಕೂಲಕ್ಕೂ ಗುರುಭವನ ಒದಗಿಬರಬೇಕು ಎಂದು ನುಡಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಸಿ.ಎಂ.ಮುನಿರಾಜು ವೈಯಕ್ತಿಕವಾಗಿ ಗುರುಭವನ ನಿರ್ಮಾಣಕ್ಕೆ ಒಂದು ಲಕ್ಷ ರೂಗಳನ್ನು ನೀಡುವುದಾಗಿ ಈ ಸಂದರ್ಭದಲ್ಲಿ ಘೋಷಿಸಿದರು.
ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗರಾಜ್, ಗುರುಭವನ ನಿರ್ಮಾಣ ಸಮಿತಿ ಕಾರ್ಯದರ್ಶಿ ಬಿ.ಆರ್.ನಾರಾಯಣಸ್ವಾಮಿ, ಖಜಾಂಚಿ ಆನಂದ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ, ಸಮನ್ವಯಾಧಿಕಾರಿ ಸುಮಾ, ದೈಹಿಕ ಶಿಕ್ಷಣ ಸಮನ್ವಯಾಧಿಕಾರಿ ಶ್ರೀನಿವಾಸ್, ರಂಗಪ್ಪ, ಬೈರಾರೆಡ್ಡಿ, ವಿಜಯಕುಮಾರ್, ಮುನಿರಾಜು, ಅಕ್ಕಲರೆಡ್ಡಿ, ಸುಬ್ಬಾರೆಡ್ಡಿ, ಚಂದ್ರಶೇಖರ್, ಎಲ್.ವಿ.ವೆಂಕಟರೆಡ್ಡಿ, ರಾಮಚಂದ್ರ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!