ಚುನಾವಣೆಗೆ ಸಕಲ ಸಿದ್ದತೆ

- Advertisement -
- Advertisement -

ಫೆಬ್ರವರಿ ೧೩ ರಂದು ನಡೆಯಲಿರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಸಕಲ ಸಿದ್ದತೆಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಕೆ.ಎಂ.ಮನೋರಮಾ ಹೇಳಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಗುರುವಾರ ಚುನಾವಣೆಯ ಪೂರ್ವಸಿದ್ದತೆಗಳ ಬಗ್ಗೆ ಅವರು ಮಾತನಾಡಿದರು.
ಈಗಾಗಲೇ ೧೬ ಮಂದಿ ಗೃಹರಕ್ಷಕದಳದ ಸಿಬ್ಬಂದಿಯೂ ಸೇರಿದಂತೆ ೨೦೦ ಮಂದಿಗೆ ಈಗಾಗಲೇ ಅಂಚೆಯ ಮೂಲಕ ಮತಪತ್ರಗಳನ್ನು ಕಳುಹಿಸಲಾಗಿದ್ದು, ಉಳಿದ ಮತಪತ್ರಗಳನ್ನು ಕಳುಹಿಸಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪೊಲೀಸ್ ಸಿಬ್ಬಂದಿಯ ಪಟ್ಟಿಯನ್ನು ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಪತ್ರವನ್ನು ರವಾನಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ, ಡಿಪೋ ಇಲ್ಲದೆ ಇರುವ ಕಾರಣ ಚಿಕ್ಕಬಳ್ಳಾಪುರ ವ್ಯವಸ್ಥಾಪಕರಿಂದ ಪಟ್ಟಿಯನ್ನು ತೆಗೆದುಕೊಂಡು ಅಂಚೆ ಬ್ಯಾಲೇಟ್ ಕಳುಹಿಸಲಾಗುತ್ತದೆ.
ಚುನಾವಣಾ ಕರ್ತವ್ಯಕ್ಕಾಗಿ ೨೮ ಬಸ್ಸುಗಳು, ೪ ಜೀಪುಗಳನ್ನು ೩೨ ಮಾರ್ಗಗಳಿಗೆ ವ್ಯವಸ್ಥೆ ಮಾಡಲಾಗಿದೆ. ವಿದ್ಯುನ್ಮಾನ ಮತಯಂತ್ರಗಳನ್ನು ಈಗಾಗಲೇ ಸಿದ್ದಪಡಿಸಿದ್ದು, ಭದ್ರತಾಕೊಠಡಿಯಲ್ಲಿ ಸುರಕ್ಷಿತವಾಗಿ ಇಡಲಾಗಿದೆ. ಯಾವುದೇ ಯಂತ್ರದಲ್ಲಿ ಲೋಪದೋಷಗಳು ಕಂಡು ಬಂದಿಲ್ಲ. ಚುನಾವಣೆಯ ಕರ್ತವ್ಯಕ್ಕಾಗಿ ತರಬೇತಿಯನ್ನು ಹೊಂದಿರುವ ಸಿಬ್ಬಂದಿಯಲ್ಲಿ ಅಂಗವಿಕಲರು, ಗರ್ಭೀಣಿಯರು, ಬಾಣಂತಿಯರ ಬದಲಾಗಿ ಬೇರೆಯವರನ್ನು ಚುನಾವಣಾ ಕರ್ತವ್ಯಕ್ಕೆ ನೇಮಕ ಮಾಡಲಾಗಿದೆ.
ಎಲ್ಲಾ ಮತಗಟ್ಟೆಗಳನ್ನು ಸಿದ್ದಪಡಿಸಲಾಗಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯವಾಗಿರುವ ಮೂಲಭೂತಸೌಕರ್ಯಗಳು ಲಭ್ಯವಿರುವಂತೆ ವ್ಯವಸ್ಥೆ ಮಾಡಲಾಗಿದೆ, ಮತಗಟ್ಟೆಗಳಲ್ಲಿ ಉತ್ತಮವಾದ ಬೆಳಕಿನ ವಾತಾವರಣವಿರುವಂತೆ, ನೋಡಿಕೊಳ್ಳಲಾಗಿದೆ, ಮತಯಂತ್ರಗಳನ್ನು ತೆಗೆದುಕೊಂಡು ಮತಗಟ್ಟೆಗಳಿಗೆ ತೆರಳುವಂತಹ ಅಧಿಕಾರಿಗಳಿಗೆ ಜೂನಿಯರ್ ಕಾಲೇಜಿನ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ಸಿಬ್ಬಂದಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಗ್ರಾಮ ಸಹಾಯಕರೂ ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ಸಿಬ್ಬಂದಿ ಚುನಾವಣಾ ಕರ್ತವ್ಯದಲ್ಲಿ ಸಕ್ರೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!