ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಯ ಫಲಿತಾಂಶ ಬಂದ ನಂತರ ಕಾಂಗ್ರೆಸ್ ಪಕ್ಷದವರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಕದಿರಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕದಿರಿನಾಯಕನಹಳ್ಳಿ ಗ್ರಾಮದ ನಾರಾಯಣಸ್ವಾಮಿ, ರಾಜೇಶ್ ಮತ್ತು ಗಂಗರಾಜು ಎಂಬುವವರಿಗೆ ಅವರ ಮನೆಗೆ ತೆರಳಿ ಧಾಳಿ ನಡೆಸಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಲ್ಲುಗಳನ್ನು ತೂರಿ ಧಾಳಿ ನಡೆಸಿದ್ದೆನ್ನಲಾಗಿದ್ದು, ನಾರಾಯಣಸ್ವಾಮಿ ಅವರಿಗೆ ತಲೆಗೆ ತೀವ್ರವಾದ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ಗೆ ಕರೆದೊಯ್ಯಲಾಗಿದೆ. ಗಂಗರಾಜು ಅವರಿಗೆ ಸೊಂಟ ಹಾಗೂ ಕಾಲಿನ ಮೂಳೆಗೆ ಪೆಟ್ಟಾಗಿ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಜೆಡಿಎಸ್ ಪಕ್ಷದವರು ಈ ಭಾಗದಲ್ಲಿ ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಸೋತಿದ್ದರಿಂದ ಬಂದು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರನ್ನು ನೀಡಿರುವುದಾಗಿ ಹಲ್ಲೆಗೊಳಗಾದವರು ತಿಳಿಸಿದ್ದಾರೆ.
- Advertisement -
- Advertisement -
- Advertisement -







