12.1 C
Sidlaghatta
Monday, January 19, 2026

ಛತ್ರಪತಿ ಶಿವಾಜಿ ಜಯಂತ್ಯುತ್ಸವ ಕಾರ್ಯಕ್ರಮ

- Advertisement -
- Advertisement -

ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ ವತಿಯಿಂದ ನಡೆದ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ತಹಸೀಲ್ದಾರ್ ಎಸ್.ಅಜಿತ್‌ಕುಮಾರ್ ರೈ ಮಾತನಾಡಿದರು.
ಶಿವಾಜಿಯು ಅಪ್ರತಿಮ ದೇಶಭಕ್ತರಾಗಿದ್ದು ಅವರ ಧೈರ್ಯ, ಸಾಹಸಕ್ಕೆ ಪ್ರತೀಕವಾದ ಜೀವನ ನಮ್ಮೆಲ್ಲರಿಗೂ ಮಾದರಿಯಾಗಬೇಕಿದೆ ಎಂದು ಅವರು ಹೇಳಿದರು.
ಛತ್ರಪತಿ ಶಿವಾಜಿಯಲ್ಲಿದ್ದ ಮಾನವೀಯ ಮೌಲ್ಯಗಳು ಹಾಗೂ ನಿಸ್ವಾರ್ಥ ಬದುಕು ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಬೇಕು. ಸಹನೆ, ಸಹಿಷ್ಣುತೆ ಮತ್ತು ಜಾತ್ಯಾತೀತತೆಯ ಗುಣಗಳಿಂದ ಶಿವಾಜಿಯು ಪ್ರಸಿದ್ಧರಾಗಿದ್ದರು. ತನ್ನ ಸಾಮ್ರಾಜ್ಯ ವಿಸ್ತರಣೆ, ಪರಿಣಾಮಕಾರಿ ದೂರದೃಷ್ಟಿಯ ನಾಯಕತ್ವ ಗುಣಗಳಿಂದಾಗಿ ಶಿವಾಜಿ ಮಹರಾಜರು ಮರಾಠ ಸಾಮ್ರಾಜ್ಯದ ಸಂಸ್ಥಾಪಕರೆಂಬ ಕೀರ್ತಿಗೆ ಪಾತ್ರರಾಗಿದ್ದರು ಎಂದರು.
ಕಾರ್ಯಕ್ರಮದಲ್ಲಿ ಹಾಪ್‌ಕಾಮ್ಸ್ ಅಧ್ಯಕ್ಷ ಚಂದ್ರೇಗೌಡ, ದೈಹಿಕ ಶಿಕ್ಷಕ ರಂಗನಾಥ್ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!