ಜಂಗಮಕೋಟೆ ಪ್ರೌಢಶಾಲಾ ಆವರಣದಲ್ಲಿ ಜನಪದ ಉತ್ಸವ

- Advertisement -
- Advertisement -

ಜನಪದಕ್ಕೆ ಅಪಾರ ಶಕ್ತಿಯಿದ್ದು, ಬದುಕಿಗೆ ನಿರಂತರ ದಾರಿ ದೀಪವಾಗಿದೆ. ಜನಪದಕ್ಕೆ ಜನಮನ್ನಣೆಯೂ ಸಿಗುತ್ತಿದೆ. ಕಲಾವಿದರು ಆಳವಾಗಿ ತೊಡಗಿಸಿಕೊಂಡು ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದು ನಾಡೋಜ ಪ್ರಶಸ್ತಿ ಪುರಸ್ಕೃತ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಜಂಗಮಕೋಟೆ ಪ್ರೌಢಶಾಲಾ ಆವರಣದಲ್ಲಿ ಈಚೆಗೆ ನಡೆದ ‘ಜನಪದ ಉತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನಪದಕ್ಕೆ ಆದಿ ಮತ್ತು ಅಂತ್ಯವಿಲ್ಲ. ಜನಪದ ಸಾಮೂಹಿಕ ಬದುಕಿನ ಸೊಗಡನ್ನು ಬಿಂಬಿಸುತ್ತದೆ. ಜನಪದ ದೇಸಿಯ ಕಲೆಗಳು ಜೀವಂತವಾಗಿರಲು ಪ್ರೋತ್ಸಾಹ ಅತ್ಯಗತ್ಯ ಎಂದು ನುಡಿದರು.
ತಾಲ್ಲೂಕಿನ ಕಾಳನಾಯಕನಹಳ್ಳಿಯ ರತ್ನಾವಳಿ ನಾಟ್ಯ, ಕ್ರೀಡಾ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಕೋಲಾಟ ಪ್ರದರ್ಶನ ಮತ್ತು ‘ಮಾಧ್ಯಮ ವ್ಯಾಯೋಗ’ ಪೌರಾಣಿಕ ನಾಟಕ ಪ್ರದರ್ಶಿಸಲಾಯಿತು. ವಿಶ್ವ ಸಾಂಸ್ಕೃತಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ‘ಜಾನಪದ ಗೀತೆಗಳ ಗಾಯನ’ ನಡೆಸಿಕೊಟ್ಟರೆ, ಪರಿವರ್ತನ ಪ್ರತಿಷ್ಠಾನ ಸಂಸ್ಥೆ ‘ಜಾನಪದ ನೃತ್ಯ’ವನ್ನು ಪ್ರದರ್ಶಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ನಾರಾಯಣಮ್ಮ, ಎಂ.ಎಸ್.ಈರಯ್ಯ, ಜೆ.ಕೆ.ಮಂಜುನಾಥ್ ಮತ್ತಿತರರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!