18.1 C
Sidlaghatta
Monday, December 8, 2025

ಜಂಗಮಕೋಟೆಯಲ್ಲಿ ಮುಕ್ತಾಯಗೊಂಡ ಬೇಸಿಗೆ ಶಿಬಿರ

- Advertisement -
- Advertisement -

ಈಗಿನ ತಾಂತ್ರಿಕ ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕ್ರೀಡೆ, ಕಲೆ ಮುಂತಾದ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ತಮಗೆ ಆಸಕ್ತಿಯಿರುವ ಕ್ಷೇತ್ರವನ್ನು ಆಯ್ಕೆ ಮಾಡುವ ಸ್ವತಂತ್ರ್ಯ ಮಕ್ಕಳು ಬೆಳೆಸಿಕೊಳ್ಳಬೇಕು ಎಂದು ಜಂಗಮಕೋಟೆ ಗ್ರಾಮ ಪಂಚಾಯ್ತಿ ಸದಸ್ಯೆ ರಹಮತ್‌ಜಾನ್‌ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿನಿಲಯದಲ್ಲಿ ಬಾಲವಿಕಾಸ ಅಕಾಡೆಮಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ 10 ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೇವಲ ಪಠ್ಯವಷ್ಟೇ ಕಲಿತರೆ ಸಾಲದು. ಜೀವನದಲ್ಲಿ ಏಳಿಗೆ ಕಾಣಲು ಮಾನವೀಯ ಮೌಲ್ಯಗಳು ಬಹಳ ಮುಖ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿಬಿರದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.
ಗ್ರಾಮ ಪಂಚಾಯ್ತಿ ಸದಸ್ಯ ಮುನಸಿರ್‌ಪಾಷ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಲಕ್ಷ್ಮೀದೇವಮ್ಮ, ಕರಾಟೆ ಶಿಕ್ಷಕರಾದ ಎಸ್‌.ಮಹಮ್ಮದ್‌, ಎಸ್‌.ನೂರುಲ್ಲ, ಯೋಗ ಶಿಕ್ಷಕಿ ದ್ರಾಕ್ಷಾಯಿಣಿ, ಚಿತ್ರಕಲೆ ಶಿಕ್ಷಕ ಅಬ್ದುಲ್‌ ಸತ್ತಾರ್‌, ಸಂಗೀತ ಶಿಕ್ಷಕ ರಾಮಮೂರ್ತಿ, ನೃತ್ಯ ಶಿಕ್ಷಕಿ ಹರ್ಷಿಯಾ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!