ಜನಪರ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸಿ

- Advertisement -
- Advertisement -

ಪ್ರಧಾನಿ ನರೇಂದ್ರಮೋದಿ ಕೈಗೊಂಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನರಿಗೆ ಮನವರಿಕೆ ಮಾಡಿಕೊಡುವುದರೊಂದಿಗೆ ಜನರಿಗೆ ಇನ್ನಷ್ಟು ಹತ್ತಿರವಾಗಬೇಕು ಎಂದು ಬಿ.ಜೆ.ಪಿ ತಾಲ್ಲೂಕು ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ ತಿಳಿಸಿದರು.
ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಬಿ.ಜೆ.ಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಗ್ರಾಮ ಪಂಚಾಯತಿ ಮಟ್ಟದ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಗ್ರಾಮ ಪಂಚಾಯತಿ ಚುನಾವಣೆಗಳು ಸಮೀಪಿಸುತ್ತಿದ್ದು ಈಗಲಿಂದಲೇ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷ ಮತ್ತು ದೇಶದ ಪ್ರಧಾನಿ ಮೋದಿಯವರು ಕೈಗೊಂಡಿರುವ ಸ್ವಚ್ಛಭಾರತ್, ಜನ್ ಧನ್ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕಾರ್ಯ ಮಾಡುವುದರೊಂದಿಗೆ ಪಕ್ಷವನ್ನು ಇನ್ನಷ್ಟು ಸಂಘಟಿಸಬೇಕು ಎಂದರು.
ಬಿ.ಜೆ.ಪಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಶಂಕರನಾರಾಯಣ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದು ೬೫ ವರ್ಷವಾದರೂ ಹಿಂದಿನ ಎಲ್ಲಾ ಸರ್ಕಾರಗಳು ಸಾರ್ವಜನಿಕರಿಗೆ ನೇರವಾಗಿ ತಲುಪುವ ಯಾವುದೇ ಯೋಜನೆ ರೂಪಿಸಲು ವಿಫಲವಾಗಿತ್ತು. ನರೇಂದ್ರ ಮೋದಿ ಪ್ರಧಾನಿಯಾದ ನಂತರವಷ್ಟೇ ಜನಾನುರಾಗಿ ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಬಗ್ಗೆ ನಾಗರೀಕರಿಗೆ ಮನವರಿಕೆ ಮಾಡಿಕೊಡುವ ಕೆಲಸ ಪಕ್ಷದಿಂದ ಆಗಬೇಕಿದೆ ಎಂದು ಹೇಳಿದರು.
ಬಿ.ಜೆ.ಪಿ ತಾಲ್ಲೂಕು ಉಸ್ತುವಾರಿಯಾದ ಚಂದ್ರಶೇಖರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮುರಳಿ, ತಾಲ್ಲೂಕು ಕಾರ್ಯದರ್ಶಿ ಶ್ರೀಧರ್, ಶಿವಕುಮಾರ್‌ಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!