28.2 C
Sidlaghatta
Saturday, February 21, 2026

ಟಿಪ್ಪುಸುಲ್ತಾನ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳ ಖಂಡನೆ

- Advertisement -
- Advertisement -

ದೇಶ ಪ್ರೇಮಿ ಟಿಪ್ಪುಸುಲ್ತಾನ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ಟಿಪ್ಪುಸುಲ್ತಾನ್ ಕಮಿಟಿಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಸೇರಿದಂತೆ ವಿಶ್ವ ಹಿಂದೂ ಪರಿಷತ್ನ ಗೋಪಾಲಜಿ ಮತ್ತಿತರರು ದೇಶಪ್ರೇಮಿ ಟಿಪ್ಪುಸುಲ್ತಾನದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುವುದರೊಂದಿಗೆ ಇತಿಹಾಸ ತಿರುಚಿ ಹೇಳಿಕೆ ನೀಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಅಲ್ಪಸಂಖ್ಯಾತ ಎಂಬ ಒಂದೇ ಕಾರಣಕ್ಕೆ ಟಿಪ್ಪುಸುಲ್ತಾನ್ರ ಬಗ್ಗೆ ಅವಹೇಳಿನಕಾರಿ ಮಾತುಗಳನ್ನಾಡುತ್ತಿದ್ದಾರೆ. ಟಿಪ್ಪು ದೇಶಕ್ಕಾಗಿ ತನ್ನಿಬ್ಬರ ಮಕ್ಕಳನ್ನು ಒತ್ತೆಯಾಗಿಟ್ಟಿದ್ದ ಹಾಗು ಮೈಸೂರು ರಾಜ್ಯ ಪರಕೀಯರ ಪಾಲಾಗಬಾರದು ಎಂಬ ಉದ್ದೇಶದಿಂದ ಯುದ್ಧದಲ್ಲಿ ವೀರ ಮರಣವನ್ನು ಅಪ್ಪಿದ. ಅಪ್ಪಟ ದೇಶಭಕ್ತನ ಬಗ್ಗೆ ಕೀಳಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಟಿಪ್ಪುಸುಲ್ತಾನ್ ಕಮಿಟಿಯ ತಾಲ್ಲೂಕು ಅಧ್ಯಕ್ಷ ಅಫ್ಜಲ್ಪಾಷ, ಪದಾಧಿಕಾರಿಗಳಾದ ಶಬ್ಬೀರ್ಪಾಷ, ಆರಿಫ್ಖಾನ್, ನವಾಜ್, ಇಮ್ರಾನ್ಖಾನ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!