18.1 C
Sidlaghatta
Wednesday, December 31, 2025

ಡಾ. ಅಂಬೇಡ್ಕರ್ ಅವರ ಆಶಯಗಳನ್ನು ನೆರವೇರಿಸಿ

- Advertisement -
- Advertisement -

ಶೋಷಿತರಿಗೆ ನ್ಯಾಯ ಸಿಗಬೇಕು. ಸಮಾಜದಲ್ಲಿ ಸಮಾನತೆಯಿರಬೇಕೆಂಬ ಉದ್ದೇಶವನ್ನು ಹೊಂದಿದ್ದ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಆಶಯಗಳನ್ನು ನೆರವೇರಿಸಲು ಶ್ರಮಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಗಂಗಾಧರಪ್ಪ ತಿಳಿಸಿದರು.
ನಗರದ ಸ್ತ್ರೀ ಶಕ್ತಿ ಭವನದಲ್ಲಿ ಮಂಗಳವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ೪೨ನೇ ಜಯಂತ್ಯುತ್ಸವ ಹಾಗೂ ತಾಲ್ಲೂಕು ಸಮಿತಿಯ ಸರ್ವಸದಸ್ಯರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸುಮಾರು ೫೦ವರ್ಷಗಳ ಹಿಂದೆ ದಲಿತರ ಸ್ಥಿತಿ ದಯನೀಯವಾಗಿದ್ದು, ಅವರ ಉದ್ದಾರಕ್ಕಾಗಿ ಪ್ರೊ.ಕೃಷ್ಣಪ್ಪ ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪಿಸಿದ್ದರು. ಅದರ ಶಾಖೆಗಳನ್ನು ರಾಜ್ಯಾದ್ಯಂತ ಸ್ಥಾಪಿಸಲು ಬಹಳ ಕಷ್ಟ ಪಟ್ಟಿದ್ದರು. ಅವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗಳು ಮೂಲ ಧ್ಯೇಯೋದ್ದೇಶಗಳನ್ನು ಮರೆಯಬಾರದು. ಸಂಘಟನೆಗಳನ್ನು ಉಳಿಸಿ ಬೆಳೆಸುವ ಕಾರ್ಯ ಎಲ್ಲರಿಗೆ ಸೇರಿದ್ದು, ತಾಲ್ಲೂಕಿನಲ್ಲಿ ಸಂಘಟನೆಯ ವಿಚಾರದಲ್ಲಿ ನಿರುತ್ಸಾಹ ತೋರುತ್ತಿದ್ದು, ದೀನದಲಿತರ ಶ್ರೇಯೋಭಿವೃದ್ಧಿಗಾಗಿ ಸಂಘಟನೆಯನ್ನು ಉಳಿಸಿ ಬೆಳೆಸಿ ಎಂದು ಹೇಳಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಅರುಣ್ ಕುಮಾರ್, ಮುಖಂಡರಾದ ನರಸಿಂಹಯ್ಯ, ಕಡೇನಹಳ್ಳಿ ಕದಿರಪ್ಪ, ವಿಜಯನರಸಿಂಹಪ್ಪ, ವೆಂಕಟೇಶ್, ಚಂದ್ರಣ್ಣ ಕಾರ್ಯಕ್ರಮದಲ್ಲಿ ಹಾಜರಿದ್ದರು.
 

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!