ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕು ಕೂಲಿ ಸಂಘದ ವತಿಯಿಂದ ಶುಕ್ರವಾರ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು.
ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಗೋಶಾಲೆಗಳನ್ನು ತೆರೆದು ಜಾನುವಾರುಗಳ ರಕ್ಷಣೆ ಮಾಡಬೇಕು. ಮಳೆಯ ವೈಫಲ್ಯದಿಂದ ಬೆಳೆ ನಷ್ಟ ಪರಿಹಾರವನ್ನು ನೀಡಬೇಕು. ಪ್ರತಿ ಗ್ರಾಮಕ್ಕೊಂದು ನ್ಯಾಯಬೆಲೆ ಅಂಗಡಿಯನ್ನು ತೆರೆಯಬೇಕು. ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಬೇಕು. 2013–14ನೇ ಸಾಲಿನ ಪಡಿತರಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಕೂಡಲೇ ಪಡಿತರ ಚೀಟಿ ವಿತರಿಸಬೇಕು. ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಿಸಬೇಕು. 2011–12 ನೇ ಸಾಲಿನ ತಾಲ್ಲೂಕಿನ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಪಿ.ಡಿ.ಒ ಮತ್ತು ಕಾರ್ಯದರ್ಶಿಗಳನ್ನು ನೇಮಿಸಬೇಕು ಹಾಗೂ ಅವರು ಕೇಂದ್ರ ಸ್ಥಾನದಲ್ಲಿ ವಾಸವಾಗುವಂತೆ ಆದೇಶಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟಿಸಿ ಶಿರಸ್ತೆದಾರರಿಗೆ ಮನವಿ ಸಲ್ಲಿಸಿದರು.
ವೆಂಕಟನರಸಪ್ಪ, ವೆಂಕಟರಾಯಪ್ಪ, ಕೆ.ಕೃಷ್ಣಾರೆಡ್ಡಿ, ಅನೀತಾ, ಎಂ.ವೆಂಕಟೇಶ್, ಪುಷ್ಪ. ಕಾಂತರಾಜ್, ಮುನಿರಾಜ್, ನಾಗಾರ್ಜುನ, ನಾರಾಯಣಸ್ವಾಮಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







