24.1 C
Sidlaghatta
Wednesday, July 30, 2025

ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ

- Advertisement -
- Advertisement -

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ನಗರದ ಸುಮಾರು 50 ಸಾವಿರ ಜನರಿಗೆ ನೀರು ಪೂರೈಸಲು ಸಹಕಾರಿಯಾಗಲಿರುವ ಎಚ್.ಎನ್ ವ್ಯಾಲಿ ಯೋಜನೆಯ ನೀರು ಸಂಸ್ಕರಿಸಲು ಉದ್ದೇಶಿಸಲಾಗಿರುವ ಕೆರೆಗಳಲ್ಲಿ ಜಾಲಿ ಗಿಡಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಕೂಡಲೇ ಅಗತ್ಯ ಕ್ರಮ ಜರುಗಿಸಬೇಕು ಎಂದು ಅವರು ತಿಳಿಸಿದರು.
ಜಾಲಿ ಗಿಡಗಳ ತೆರವಿಗೆ ಈಗಾಗಲೇ ಸರ್ಕಾರ ಆದೇಶ ಹೊರಡಿಸಿದ್ದು, ಸರ್ಕಾರದ ಆದೇಶದಂತೆ ಕೆರೆಗಳಲ್ಲಿ ಬೆಳೆದು ನಿಂತಿರುವ ಜಾಲಿ ಗಿಡಗಳನ್ನು ಕೂಡಲೇ ತೆರವುಗೊಳಿಸಬೇಕು. ಕ್ಷೇತ್ರದಾದ್ಯಂತ ಬೇಸಿಗೆ ಕಾಲದಲ್ಲಿ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸುವುದು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಕ್ಷೇತ್ರದ ಜನತೆಗೆ ತಲುಪಿಸುವಂತಹ ಮಹತ್ತರವಾದ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಅಧಿಕಾರಿಗಳ ಬದ್ಧತೆಯಿಂದಲೇ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಟೆಂಡರ್ ಮುಗಿದು ಕಾಮಗಾರಿ ಆರಂಭವಾದ ನಂತರ ಗುತ್ತಿಗೆದಾರರು ಸಮರ್ಪಕವಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳು ಮೇಲುಸ್ತುವಾರಿ ವಹಿಸಿ ಕೆಲಸ ಮಾಡಬೇಕು. ನಗರದ ಮಯೂರ ವೃತ್ತದ ಬಳಿ ನಿರ್ಮಿಸಲಾಗುರತ್ತಿರುವ ವಾಲ್ಮೀಕಿ ಭವನದ ಕಾಮಗಾರಿ ನಿಧಾನತಿಯಲ್ಲಿ ನಡೆಯುತ್ತಿದೆ. ಬಹಳಷ್ಟು ಕಾಮಗಾರಿಗಳು ಈವರೆಗೂ ಪೂರ್ಣಗೊಂಡಿಲ್ಲ ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕ ಆಸ್ಪತ್ರೆಗೆ ಸೇರಿದ ಆಂಬ್ಯುಲೆನ್ಸ್‌ಗಳ ದುರುಪಯೋಗವಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಆಂಬುಲೆನ್ಸ್ ವಾಹನಗಳಿಗೆ ಕೂಡಲೇ ಜಿಪಿಎಸ್ ಅಳವಡಿಸುವಂತೆ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಯಿತು.
ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅರ್ಹಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಕಾರ್ಯನಿರ್ವಹಿಸಬೇಕು. ಪ್ರಗತಿ ಪರಿಶೀಲನಾ ಸಭೆಗೆ ಇಲಾಖೆಯಿಂದ ಆಗಿರುವ ಕಾಮಗಾರಿಗಳ ಮಾಹಿತಿ ತರದೇ ಬರುವ ಹಾಗೂ ಸಭೆಗೆ ಗೈರು ಹಾಜರಾದವರ ವಿರುದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬೆರಯುವಂತೆ ಇಓಗೆ ಸೂಚಿಸಲಾಯಿತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಶಿವಕುಮಾರ್, ಸಹಾಯಕ ನಿರ್ದೇಶಕ ಚಂದ್ರಪ್ಪ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!