ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ತಾಲ್ಲೂಕು ಮಟ್ಟದ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಶಾಲಾ ಕಾಲೇಜುಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ವಿದ್ಯಾರ್ಥಿಗಳ ವ್ಯಕ್ತಿತ್ವದ ಏಳಿಗೆಗೆ ಪೂರಕವಾಗಿ ಮಕ್ಕಳಲ್ಲಿ ಇರುವ ಸುಪ್ತಪ್ರತಿಭೆಯನ್ನು ಹೊರತರುವ ಮತ್ತು ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ವೇದಿಕೆಯಾಗಿ ಪ್ರತಿಭಾ ಕಾರಂಜಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ತಿಳಿಸಿದರು.
ಮಕ್ಕಳಲ್ಲಿ ಅಡಗಿರುವ ಜನಪದ ಕಲೆ ಮತ್ತು ಸಂಸ್ಕೃತಿಯನ್ನು ಹೊರಹೊಮ್ಮಿಸುವ ಪ್ರತಿಭಾ ಕಾರಂಜಿ ಕಾರ್ಯಕ್ರಮ ಪ್ರತಿಭಾನ್ವೇಷಣೆಗೆ ಉತ್ತಮ ವೇದಿಕೆಯಾಗಿದೆ. ಗ್ರಾಮಾಂತರ ಮಟ್ಟದಲ್ಲಿ ಪ್ರತಿಭಾವಂತ ಮಕ್ಕಳಿದ್ದು, ಅವರಲ್ಲಿ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಕೆಲಸದತ್ತ ಪೋಷಕರು, ಶಿಕ್ಷಕರು ಹೆಚ್ಚು ಶ್ರಮಿಸಬೇಕು ಎಂದರು.
ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ರೂಪಿಸಲು ಪೋಷಕರು ಹಾಗೂ ಶಿಕ್ಷಕರನ್ನು ಪ್ರೋತ್ಸಾಹಿಸುವ ವೇದಿಕೆಯಿದು. ಪಠ್ಯೇತ್ತರ ಚಟುವಟಿಕೆಯ ಜೊತೆಗೆ ಆಟದ ಮೂಲಕ ಪ್ರತಿಭೆಯನ್ನು ಗುರುತಿಸುವ ಮಟ್ಟಕ್ಕೆ ಮಕ್ಕಳ ಜ್ಞಾನವನ್ನು ವೃದ್ದಿಸಲು ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಇದು ವಿದ್ಯಾರ್ಥಿಗಳಿಗೆ ಸದುಪಯೋಗವಾಗಬಲ್ಲದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಪದವಿಪೂರ್ವ ಕಾಲೇಜಿನ ಮುಖ್ಯಶಿಕ್ಷಕ ಆನಂದ್, ಅಕ್ಷರ ದಾಸೋಹ ಆಂಜನಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ, ಎನ್.ಪಿ.ಎಸ್ ತಾಲ್ಲೂಕು ಅಧ್ಯಕ್ಷ ಗಜೇಂದ್ರ, ಸುದರ್ಶನ್, ರವೀಂದ್ರ, ನಾರಾಯಣಸ್ವಾಮಿ, ಪ್ರಕಾಶ್, ಸಾಧಿಕ್ ಪಾಷ, ಸುರೇಶ್, ರಂಗನಾಥ್, ಪಿಳ್ಳಣ್ಣ, ಭಾಸ್ಕರ್ಗೌಡ, ತ್ಯಾಗರಾಜು, ಎಲ್.ವಿ.ವೆಂಕಟರೆಡ್ಡಿ ಹಾಜರಿದ್ದರು.
- Advertisement -
- Advertisement -
- Advertisement -