ತಾಲ್ಲೂಕಿನ ಭಕ್ತರಹಳ್ಳಿ ಪಂಚಾಯತಿ ವ್ಯಾಪಿಯ ತೊಟ್ಲಗಾನಹಳ್ಳಿ ಗೇಟ್ ಬಳಿ ಇರುವ ಆಂಜನೇಯಸ್ವಾಮಿ ಹಾಗೂ ಕೈವಾರ ತಾತಯ್ಯನವರ ದೇವಾಲಯದ ವಿಗ್ರಹಗಳ ಪುನರ್ ಪ್ರತಿಷ್ಠಾಪನಾ ಮಹೋತ್ಸವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.
ಭಾನುವಾರ ಮತ್ತು ಸೋಮವಾರ ವಿವಿಧ ಪೂಜಾ ಕಾರ್ಯಕ್ರಮಗಳು ಮತ್ತು ಹೋಮಗಳನ್ನು ಹಮ್ಮಿಕೊಳ್ಳಲಾಗಿತ್ತು. ತೊಟ್ಲಗಾನಹಳ್ಳಿ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ದೇವಾಲಯದಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ದೇವರ ವಿಗ್ರಹಗಳ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗಂಗಾಪೂಜೆ, ಕಳಸ ಸ್ಥಾಪನೆ, ಗಣಪತಿ ಪೂಜೆ, ಅಗ್ನಿ ಪ್ರತಿಷ್ಠಾಪನೆ, ವಾಸ್ತು ಹೋಮ, ಗಣ ಹೋಮ, ಮೃತ್ಯುಂಜಯ ಹೋಮ, ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು. ಭಕ್ತರಿಗೆ ಅನ್ನಸಂರ್ಪಣೆಯನ್ನು ಏರ್ಪಡಿಸಲಾಗಿತ್ತು. ನುರಿತ ಕಲಾವಿದರಿಂದ ಭಜನೆಯನ್ನು ನಡೆಸಲಾಯಿತು.
ದ್ಯಾವಪ್ಪ, ತ್ಯಾಗರಾಜು, ವೆಂಕಟರಾಜು, ನಾರಾಯಣಸ್ವಾಮಿ, ಅಶ್ವತ್ಥ, ಕೃಷ್ಣಪ್ಪ, ಅಂಬರೀಷ್ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -