25.4 C
Sidlaghatta
Friday, August 1, 2025

ನಡಿಪಿನಾಯಕನಹಳ್ಳಿ ಬಳಿ ನೀಲಗಿರಿ ತೋಪಿಗೆ ಬೆಂಕಿ

- Advertisement -
- Advertisement -

ತಾಲ್ಲೂಕಿನ ಜಂಗಮಕೋಟೆ ರಸ್ತೆಯಲ್ಲಿರುವ ನಡಿಪಿನಾಯಕನಹಳ್ಳಿಯ ಬಳಿ ರಸ್ತೆಯ ಪಕ್ಕದಲ್ಲೆ ಇದ್ದ ನೀಲಗಿರಿ ತೋಪಿಗೆ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ ಸುಮಾರು ೩ ಎಕರೆಯಷ್ಟು ಪ್ರದೇಶದಲ್ಲಿನ ಮರಗಳು ಸುಟ್ಟುಹೋಗಿವೆ.
ತಾಲ್ಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಪದಾಧಿಕಾರಿಗಳು ಬೆಂಕಿ ಹೊತ್ತುಕೊಂಡಿರುವ ಬಗ್ಗೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗೆ ತಕ್ಷಣ ಮಾಹಿತಿ ನೀಡಿದ್ದರಿಂದ ನೀಲಗಿರಿ ತೋಪಿನ ಸಮೀಪದಲ್ಲಿದ್ದ ತೋಟಗಳಲ್ಲಿನ ಬೆಳೆಗಳು ನಾಶವಾಗುವುದನ್ನು ತಪ್ಪಿಸಿದ್ದಾರೆ.
ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮೋಹನ್ ತಿಳಿಸಿದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!